ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) “ಯೌವ್ವನ ಮರೆಯಾಗುವ ಮುನ್ನ” ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ “ಯುನಿಟ್ ಸಮ್ಮೇಳನ“ ನಡೆಯುತ್ತಿರುವಾಗ SSF ಮೇಗಿನಪೇಟೆ ಶಾಖೆಯಲ್ಲಿ ಯುನಿಟ್ ಸಮ್ಮೇಳನ ಇದೇ ಬರುವ ತಾರೀಕು ಅಕ್ಟೋಬರ್ 25’ರಂದು ಮೇಗಿನಪೇಟೆ ನ್ಯೂಬಿ ಫೀಸ್ಕೂಲ್ ಎದುರುಗಡೆ ನಡೆಯಲಿದೆ.
ರಾತ್ರಿ 7 ಗಂಟೆಗೆ ನಡೆಯುವ ಯುನಿಟ್ ಕಾನ್ಫರೆನ್ಸ್ ಕಾರ್ಯಕ್ರಮವು ಎಸ್ಸೆಸ್ಸೆಫ್ ಮೇಗಿನಪೇಟೆ ಶಾಖಾಧ್ಯಕ್ಷರಾದ ಯಾಸೀನ್ ಸಹದಿ ’ರವರ ಅಧ್ಯಕ್ಷತೆಯಲ್ಲಿ, SSF ವಿಟ್ಲ ಸೆಕ್ಟರ್ ಅಧ್ಯಕ್ಷರಾದ ಅಬೂಬಕರ್ ಹಿಮಮಿ ಸಖಾಫಿ ದುಅ:ದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ವಿಟ್ಲ SSF ಡಿವಿಶನ್ ಸದಸ್ಯರಾದ ರಹೀಂ ಸಖಾಫಿ ಸ್ವಾಗತ ನಡೆಸುವರು ಹಾಗೂ ಅಬೂಬಕರ್ ಫೈಝಿ(ಸುನ್ನೀ ಫೈಝಿ)ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
SSF ದ.ಕ ಜಿಲ್ಲಾ ಕಾರ್ಯದರ್ಶಿ ಸಲೀಂ ಬೈರಿಕಟ್ಟೆ ಪ್ರಾಸ್ತಾವಿಕ ಭಾಷಣ ನಡೆಸಲಿದ್ದು ಹಾಗೂ SSF ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಜಬ್ಬಾರ್ ಸಖಾಫಿ ಪಾತೂರ್
ಯೌವ್ವನ ಮರೆಯಾಗುವ ಮುನ್ನ ಇದರ ಕುರಿತು ಅರ್ಥ ಗರ್ಭಿತ ಪ್ರಭಾಷಣ ನಡೆಸಲಿದ್ದಾರೆ.
ಶಾಖಾ ಪ್ರದಾನ ಕಾರ್ಯದರ್ಶಿ ಉಬೈದ್ ವಿಯಂ ಕಾರ್ಯಕ್ರಮ ನಿರೂಪಣೆ ಹಾಗೂ ಧನ್ಯವಾದ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ