ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಇದರ ವತಿಯಿಂದ ರಾಜ್ಯದ ಎಲ್ಲಾ ಝೋನ್ ಗಳ ಮುಲಾಖಾತ್ ನಡೆಯುತ್ತಿದ್ದು ಅದರಂತೆ ಮಂಗಳೂರು ಝೋನ್ ಉಲಮಾ ಮುಲಾಖಾತ್ ಅಕ್ಟೋಬರ್ 24ರಂದು ಬೋಂದೆಲ್ ಅಲ್ ರಶಾದ್ ಎಜುಕೇಷನ್ ಸೆಂಟರ್ ನಲ್ಲಿ ಝೋನ್ ಅಧ್ಯಕ್ಷರಾದ ಉಸ್ತಾದ್ ಬಶೀರ್ ಮದನಿ ಅಲ್ ಕಾಮಿಲ್ ರವರ ಅಧ್ಯಕ್ಷತೆಯಲ್ಲಿ ಯಿತು.

ಅಲ್ ರಶಾದ್ ಶಿಕ್ಷಣ ಸಂಸ್ಥೆಯ ಅಬ್ದುಲ್ ರಹಿಮಾನ್ ಸಖಾಫಿ ಬಾಕ್ರಬೈಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಅಲ್ ಹಾಜ್ ಹಂಝ ಸಖಾಫಿ ಬಂಟ್ವಾಳ ಉಲಮಾ ಗಳ ಜವಾಬ್ದಾರಿ ಮತ್ತು ನಾಯಕತ್ವ ಗುಣ ಎಂಬುದರ ಬಗ್ಗೆ ವಿಷಯ ಮಂಡಿಸಿದರು. ಹಿರಿಯ ವಿದ್ವಾಂಸ ಶರೀಫ್ ಮುಸ್ಲಿಯಾರ್ ಕೂಳೂರು, ಜೆಪ್ಪು ರೇಂಜ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು ಮಂಗಳೂರು ರೇಂಜ್ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ, ಇಸಾಕ್ ಸಖಾಫಿ ಮರಕಡ,ಆರಿಫ್ ಮದನಿ ಬೀರ್ಪುಗುಡ್ಡೆ, ಹಮೀದ್ ಸಖಾಫಿ ಬೋಂದೆಲ್ ಮುಂತಾದವರು ಉಪಸ್ಥಿತರಿದ್ದರು. ಮಂಗಳೂರು ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ