janadhvani

Kannada Online News Paper

ಕೊಡಗು: ಶಾಂತಿ ಕಾಪಾಡಲು ಎಸ್ಸೆಸ್ಸೆಫ್ ಮನವಿ

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶದೊಂದಿಗೆ ಉದ್ರೇಕಕಾರಿ ಭಾಷಣ ಮಾಡಿ ರಾಜಕೀಯ ಬೇಳೆ ಬೇಯಿಸಲು ಯತ್ನಿಸುವವರ ಕುತಂತ್ರಕ್ಕೆ ಯಾರೂ ಬಲಿಯಾಗದೆ ಜಿಲ್ಲೆಯ ಶಾಂತಿಗಾಗಿ ಪ್ರಯತ್ನಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಂಡಂಗೇರಿ ಕರೆ ನೀಡಿದ್ದಾರೆ.

ರಾಜಕೀಯ ಸ್ವಾರ್ಥಕ್ಕಾಗಿ ಭಾಷಣಕಾರೊಬ್ಬರು ಪ್ರವಾದಿಯರ ಬೋಧನೆಗಳನ್ನೇ ಕ್ರೌರ್ಯ ಎಂದು ಹೀಯಾಳಿಸಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹವರ ವಿರುದ್ಧ ಸಂಬಂದಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.