ಬೆಂಗಳೂರು ನ- 10 : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಇದರ ರಾಜ್ಯ ಪ್ರತಿನಿಧಿ ಸಮಾವೇಶ ಹಾಗೂ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕಮಿಟಿ ಘೋಷಣಾ ಸಮಾರಂಭದ ಸ್ವಾಗತ ಸಮಿತಿಯು ಇಂದು ಬೆಂಗಳೂರಿನ ಹಜ್ ಕಮಿಟಿಯ ಎಸ್ಸೆಸ್ಸಫ್ ಕೇಂದ್ರ ಕಛೇರಿಯಲ್ಲಿ ನಡೆಯಿತು.

ರಾಜ್ಯ ಎಸ್ಸೆಸ್ಸಫ್ ನ ಐದು ಸಾವಿರ ಆಯ್ದ ಪ್ರತಿನಿಧಿಗಳ ಸಮಾವೇಶವು ಬರುವ ವರ್ಷ ಜನವರಿ 26, 27 ರಂದು ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ. ಸದ್ರಿ ಸಮಾವೇಶದಲ್ಲಿ ಎರಡು ದಿನಗಳಲ್ಲಿ ವಿವಿಧ ವಿಚಾರಗಳಲ್ಲಿ ವಿಚಾರಗೋಷ್ಠಿಗಳು, ಸೆಮಿನಾರ್ ಗಳು ನಡೆಯಲಿದೆ. ದೇಶ, ವಿದೇಶದ ವಿವಿಧ ಕ್ಷೇತ್ರದ ಗಣ್ಯ ವ್ಯಕ್ತಿಗಳು ಸೆಮಿನಾರ್ ಮತ್ತು ಚರ್ಚಾಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ.
ಜನವರಿ 27 ರ ಸಾಯಂಕಾಲ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಘೊಷಣೆಯನ್ನು ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಧಿಕೃತವಾಗಿ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಹಲವು ನಾಯಕರು ಭಾಗವಹಿಸಲಿದ್ದಾರೆ.
ಸದ್ರಿ ಕಾರ್ಯಕ್ರಮದ ಸ್ವಾಗತ ಸಮಿತಿಯು ಇಂದು ಜಾಮಿಅ ಸಅದಿಯ್ಯಾ ಅರಬಿಯ್ಯಾ ಕಾಸರಗೋಡು ಇದರ ಅಧ್ಯಕ್ಷರಾದ ಕೆ.ಎಸ್ ಆಟಕೋಯ ತಂಙಲ್ ಕುಂಬೋಳ್ ನಾಯಕತ್ವದಲ್ಲಿ ರಚಿಸಲಾಯಿತು. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜನಾಬ್ ಎಸ್ ಎಸ್ ಎ ಖಾದರ್ ಹಾಜಿ, ಜನರಲ್ ಕನ್ವೀನರ್ ಎನ್.ಕೆ. ಎಂ ಶಾಫಿ ಸ ಅದಿ ಬೆಂಗಳೂರು, ಫೈನಾನ್ಸ್ ಸೆಕ್ರಟರಿ ಉಮರ್ ಹಾಜಿ, ಕೋರ್ಡಿನೇಟರ್ ಮುಹಮ್ಮದ್ ಶೆರೀಫ್ ಸಮೇತವಿರುವ 101 ಸದಸ್ಯರ ಸ್ವಾಗತ ಸಮಿತಿಗೆ ರೂಪು ಕೊಡಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ