ಬೆಂಗಳೂರು, ನವೆಂಬರ್ 11 : ಕರ್ನಾಟಕದ ಜನಪ್ರಿಯ ರಾಜಕಾರಣಿ, ಕೇಂದ್ರ ಸಚಿವ, ಬಿಜೆಪಿಯ ಪ್ರಮುಖ ನಾಯಕ ಅನಂತ್ ಕುಮಾರ್ (59) ಅವರು ನವೆಂಬರ್ 11ರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ಕಡೆಯ ಹಂತದಲ್ಲಿ ಲಂಡನ್ನಿಗೆ ಹೋಗಿ ಚಿಕಿತ್ಸೆ ಪಡೆದು, ಸಾಕಷ್ಟು ಹೋರಾಟ ನಡೆಸಿದರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ. ಸೋಮವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅವರು ನಗರದ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನವೇ ಕ್ಯಾನ್ಸರ್ ಉಲ್ಬಣಗೊಂಡಿತ್ತು. ಸಂದರ್ಶನ ನೀಡಲು ಕಷ್ಟವಾಗುತ್ತಿದ್ದರೂ, ನಗುಮೊಗದಿಂದಲೇ ಮಾತನಾಡುತ್ತಿದ್ದರು. ತಮ್ಮೆಲ್ಲ ನೋವನ್ನು ಮರೆತು ಪ್ರಚಾರದಲ್ಲಿ ತೊಡಗಿದ್ದರು. ಆದರೆ, ಅಷ್ಟರಲ್ಲಾಗಲೇ ಕ್ಯಾನ್ಸರ್ ಕಡೆಯ ಹಂತ ತಲುಪಿಬಿಟ್ಟಿತ್ತು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ, ಹಾಗು ಸಂಸದೀಯ ವ್ಯವಹಾರಗಳ ಖಾತೆಯ ಸಚಿವರಾಗಿದ್ದ ಅವರು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಗೆದ್ದಿದ್ದರು. ಅವರು ಪತ್ನಿ ಅದಮ್ಯ ಚೇತನ ಸಂಸ್ಥೆಯ ರೂವಾರಿ ಡಾ. ತೇಜಸ್ವಿನಿ, ಮಕ್ಕಳಾದ ಐಶ್ವರ್ಯ, ವಿಜೇತಾ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್