ಭೋಪಾಲ್: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತಾದರೂ, ಮಧ್ಯ ಪ್ರದೇಶದಲ್ಲಿ ಮಾತ್ರ ಮತಎಣಿಕೆ ಕಾರ್ಯ ಮಾತ್ರ ಇನ್ನೂ ಮುಕ್ತಾಯವಾಗಿರಲಿಲ್ಲ.ಗೊಂದಲ ಮತ್ತು ಅಧಿಕಾರಿಗಳ ಯಡವಟ್ಟಿನಿಂದಾಗಿ ಇಂದು ಮುಂಜಾನೆಯವರೆಗೂ ಫಲಿತಾಂಶ ಪ್ರಕಟಣೆನೆ ತಡವಾಗಿತ್ತು. ಆದರೀಗ ಕೊನೆಗೂ ಚುನಾವಣಾ ಆಯೋಗ ಮಧ್ಯ ಪ್ರದೇಶದಲ್ಲಿ ಮತಎಣಿಕೆ ಕಾರ್ಯ ಮುಕ್ತಾಯಗೊಳಿಸಿದ್ದು, ಒಟ್ಟು 230 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷಕ್ಕೆ 114 ಸ್ಥಾನ ಲಭಿಸಿದ್ದು, ಬಿಜೆಪಿ 109 ಸ್ಥಾನಗಳನ್ನು ಗಳಿಸಿದೆ. ಇನ್ನು ಮಹಾ ಘಟ್ ಬಂಧನ್ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಎಸ್ ಪಿ 1 ಸ್ಥಾನ ಪಡೆದಿದ್ದರೆ, ಬಿಎಸ್ ಪಿ 2 ಸ್ಥಾನಗಳಿಸಿದೆ.
ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದು, ಸರ್ಕಾರ ರಚನೆಯಲ್ಲಿ ನಿರ್ಣಾಯ ಪಾತ್ರ ವಹಿಸುವ ಸಾಧ್ಯತೆ ಇದೆ. ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆಯಾದರೂ, ಕೇವಲ ಎರಡು ಸ್ಥಾನಗಳಿಂದ ಸರಳ ಬಹುಮತದಿಂದ ವಂಚಿತವಾಗಿದೆ. ಹೀಗಿರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಸರ್ಕಾರ ರಚನೆ ಮಾಡಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿವೆ. ಹೀಗಾಗಿ ಇಲ್ಲಿ ಯಾರು ಸರ್ಕಾರ ರಚನೆ ಮಾಡಬಹುದು ಎಂಬುದರ ಬಗ್ಗೆ ಕುತೂಹಲವೂ ಇದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ