ಇಡ್ಕಿದು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಅಳಕೆಮಜಲು ಇದರ ಮಹಾಸಭೆಯು ಇತ್ತೀಚೆಗೆ ಶಾಖಾಧ್ಯಕ್ಷರಾದ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ಹಿದಾಯತುಲ್ ಇಸ್ಲಾಂ ಮದ್ರಸ ಹಾಲ್ ನಲ್ಲಿ ನಡೆಯಿತು. ಸ್ಥಳೀಯ ಖತೀಬ್ ಮುಹಮ್ಮದ್ ಶರೀಫ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು.ಕಾರ್ಯದರ್ಶಿ ಉನೈಸ್ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು. ವೀಕ್ಷಕರಾಗಿ ವಿಟ್ಲ ಡಿವಿಷನ್ ಉಪಾಧ್ಯಕ್ಷರಾದ ರಹೀಮ್ ಸಖಾಫಿ ಆಗಮಿಸಿದ್ದರು. ಸಂಘಟನೆಯ ಅನಿವಾರ್ಯತೆಯ ಬಗ್ಗೆ ಸಿದ್ದೀಕ್ ಹಾಜಿ ಕಬಕ ತರಗತಿ ನಡೆಸಿದರು. ಹಾಲಿ ಸಮಿತಿಯನ್ನು ಬರ್ಕಾಸ್ತುಗೊಳಿಸಿ ನೂತನ ಸಮಿತಿ ರಚಿಸಲಾಯಿತು.
ನೂತನ ಪದಾಧಿಕಾರಿಗಳು:ಅಧ್ಯಕ್ಷರಾಗಿ ಹೈದರ್ ಅಳಕೆಮಜಲು, ಉಪಾಧ್ಯಕ್ಷರುಗಳಾಗಿ ನಝೀರ್ ಬಡ್ಡಂಗರೆ ಮತ್ತು ಜಾಬೀರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಕೋಣಿಮಾರ್, ಜೊತೆ ಕಾರ್ಯದರ್ಶಿಗಳಾಗಿ ಉನೈಸ್ ಮತ್ತು ರಿಝ್ವಾನ್ ನಡುಮಜಲು, ಕೋಶಾಧಿಕಾರಿಯಾಗಿ ಬಾತಿಷ್ ಅಳಕೆಮಜಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಭೆಯಲ್ಲಿ ಪ್ರಮುಖರಾದ ದಾವೂದ್ ಅಶ್ರಫಿ, ಅಝ್ಹರುದ್ದೀನ್ ಫಾಳಿಲಿ, ವಿಟ್ಲ ಸೆಕ್ಟರ್ ಕಾರ್ಯದರ್ಶಿ ಸೈಫುದ್ದೀನ್ ಅಳಕೆಮಜಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮೊದಲು ಉನೈಸ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಹಾರಿಸ್ ಧನ್ಯವಾದಗೈದರು.
ನೂತನ ಪದಾಧಿಕಾರಿಗಳು:ಅಧ್ಯಕ್ಷರಾಗಿ ಹೈದರ್ ಅಳಕೆಮಜಲು, ಉಪಾಧ್ಯಕ್ಷರುಗಳಾಗಿ ನಝೀರ್ ಬಡ್ಡಂಗರೆ ಮತ್ತು ಜಾಬೀರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಸ್ ಕೋಣಿಮಾರ್, ಜೊತೆ ಕಾರ್ಯದರ್ಶಿಗಳಾಗಿ ಉನೈಸ್ ಮತ್ತು ರಿಝ್ವಾನ್ ನಡುಮಜಲು, ಕೋಶಾಧಿಕಾರಿಯಾಗಿ ಬಾತಿಷ್ ಅಳಕೆಮಜಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಭೆಯಲ್ಲಿ ಪ್ರಮುಖರಾದ ದಾವೂದ್ ಅಶ್ರಫಿ, ಅಝ್ಹರುದ್ದೀನ್ ಫಾಳಿಲಿ, ವಿಟ್ಲ ಸೆಕ್ಟರ್ ಕಾರ್ಯದರ್ಶಿ ಸೈಫುದ್ದೀನ್ ಅಳಕೆಮಜಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮೊದಲು ಉನೈಸ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಹಾರಿಸ್ ಧನ್ಯವಾದಗೈದರು.














ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ