ಮೈಸೂರು: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತಕ್ಕೆ ಈಗಾಗಲೇ 14 ಮಂದಿ ಮೃತಪಟ್ಟಿದ್ದು, ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ವರದಿ ಮೂಲಕ ತಿಳಿದು ಬಂದಿದೆ.
ಭಕ್ತರು ಸೇವಿಸಿದ್ದ ವಿಷ ಪ್ರಸಾದದಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿರುವುದು ದೃಢಪಟ್ಟಿದೆ. ದುಷ್ಕರ್ಮಿಗಳು ಮೊದಲಿಗೆ ನೀರಿನಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿಕೊಂಡು ಬಳಿಕ ಪ್ರಸಾದಕ್ಕೆ ಬೆರೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಖಚಿತವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಐಜಿಪಿ ಶರತ್ ಚಂದ್ರ ಅವರು, ಪ್ರಸಾದದಲ್ಲಿ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಮಿಶ್ರಣ ಆಗಿದೆ ಎನ್ನುವ ವರದಿ ಬಂದಿದೆ. ಇದನ್ನು ಕೀಟನಾಶಕ್ಕೆ ಬಳಸುತ್ತಾರೆ. ಗಿಡಕ್ಕೆ ಹುಳು ಮತ್ತು ರೋಗ ಬಂದಾಗ ಈ ಕೀಟನಾಶವನ್ನು ಸಿಂಪಡಿಸಲಾಗುತ್ತದೆ. ಇದೇ ಕ್ರಿಮಿನಾಶಕವನ್ನು ಬೆರೆಸಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.ಈ ಕುರಿತು ಸದ್ಯಕ್ಕೆ ಅನುಮಾನ ಬಂದಂತಹ ವ್ಯಕ್ತಿಗಳನ್ನು ಕರೆದು ವಿಚಾರಣೆ ಮಾಡುತ್ತಿದ್ದೇವೆ. ಶೀಘ್ರವಾಗಿಯೇ ತನಿಖೆ ನಡೆಯುತ್ತಿದೆ ಎಂದು ಶರತ್ ಚಂದ್ರ ಅವರು ಹೇಳಿದ್ದಾರೆ.
ಘಟನೆ:ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಗೋಪುರದ ಶಂಕುಸ್ಥಾಪನೆ ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ದುರಂತದಲ್ಲಿ ಈವರೆಗೂ 14 ಮಂದಿ ಮೃತಪಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ