ಮಧುರೈ: ದೇಶದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ 2019 ರ ಚುನಾವಣೆಯಲ್ಲಿ ಯಾರು ವಿಜಯ ಸಾಧಿಸುತ್ತಾರೆ, ಮುಂದಿನ ಪ್ರಧಾನಮಂತ್ರಿ ಯಾರಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗೆ ನಿಲ್ಲುತ್ತಿದ್ದ ಬಾಬಾ ರಾಮ್ದೇವ್ ಇದೀಗ ಮುಂದಿನ ಪ್ರಧಾನಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅಚ್ಚರಿ ಮೂಡಿಸಿದ್ದಾರೆ. ತಮಿಳುನಾಡಿನ ಮಧುರೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಬಾ ರಾಮ್ದೇವ್, ದೇಶದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಜಟಿಲವಾಗಿದೆ. 2019 ರಲ್ಲಿ ಯಾರು ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗದು? ಆದರೆ ಹೋರಾಟ ಬಹಳ ರೋಮಾಂಚನಕಾರಿಯಾಗಿರುವುದು ಖಚಿತ. ನಾನು ರಾಜಕೀಯದಲ್ಲಿ ಕೇಂದ್ರೀಕರಿಸುತ್ತಿಲ್ಲ. ನನ್ನ ವೈಯಕ್ತಿಕ ದೃಷ್ಟಿ ಸ್ವತಂತ್ರ ಮತ್ತು ಎಲ್ಲಾ ಪಕ್ಷ. ನಾನು ಯಾವುದೇ ವ್ಯಕ್ತಿ ಅಥವಾ ಯಾವುದೇ ಪಕ್ಷದ ಪರ-ವಿರೋಧ ಪ್ರಚಾರ ಮಾಡುವುದಿಲ್ಲ ಎಂದು ಬಾಬಾ ರಾಮದೇವ್ ತಮಿಳುನಾಡಿನ ಮಧುರೈನಲ್ಲಿ ಹೇಳಿದರು.
ನಮಗೆ ರಾಜಕೀಯ ಅಥವಾ ಧಾರ್ಮಿಕ ಉದ್ದೇಶದ ದೇಶ ಬೇಕಿಲ್ಲ. ನಮಗೆ ಬೇಕಿರುವುದು ಆಧ್ಯಾತ್ಮಿಕ ದೇಶ ಮತ್ತು ಆಧ್ಯಾತ್ಮಿಕ ಜಗತ್ತು. ಯೋಗ ಮತ್ತು ವೈದಿಕ ಆಚರಣೆಗಳಿಂದ ನಾವು ದೈವಿಕ, ಸಮೃದ್ಧಿಯ ಮತ್ತು ಆಧ್ಯಾತ್ಮಿಕ ಭಾರತವನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ