ಮಂಗಳೂರು : ಜಗತ್ತಿಗೆ ಮಾದರಿ ಜೀವನ ಕ್ರಮವನ್ನು ಪರಿಚಯಿಸಿ ನುಡಿದಂತೆಯೇ ಬದುಕಿ ಬಾಳಿದ ಲೋಕ ನಾಯಕ ಹಝ್ರತ್ ಮುಹಮ್ಮದ್ ಪೈಗಂಬರ್ (ಸ.ಅ) ರ ವ್ಯಕ್ತಿತ್ವ ವನ್ನು ಅಶ್ಲೀಲ ಮತ್ತು ಅಪವಾದಗಳೊಂದಿಗೆ ನಿರೂಪಿಸಿ ಮುಸ್ಲಿಮ್ ಜನ- ಮನವನ್ನು ಘಾಸಿಗೊಳಿಸಿದ ಸುವರ್ಣ ಕನ್ನಡ ಟಿ.ವಿ.ಚಾನಲ್ ನ ನಿರೂಪಕ ಅಜಿತ್ ಹನುಮಕ್ಕ ಘಟನೆ ಖಂಡನೀಯವಾಗಿದೆ.
ಅಜಿತ್ ಹನುಮಕ್ಕನನ್ನು ಭಾರತೀಯ ದಂಡ ಸಂಹಿತೆ ಗೆ ಅನುಗುಣವಾಗಿ ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಸುನ್ನೀ ಮ್ಯಾನೇಜ್’ಮೆಂಟ್ ಅಸೋಷಿಯೇಶನ್ (ರಿ) SMA ರಾಜ್ಯಾ ಉಪಧ್ಯಕ್ಷರಾದ ಹಾಜೀ ಕೆ.ಎ.ಹಮೀದ್ ಕೊಡಂಗಾಯಿ ಅವರು ಹೇಳಿದರು.
ಇಂತಹ ಮಾದ್ಯಮದವರು ಸಮಾಜಕ್ಕೆ ಅಪಾಯಕಾರಿ. ಇಂತಹ ಹೇಳಿಕೆ ಗಳ ಮೂಲಕ ಸಮಾಜದಲ್ಲಿ ಅಶಾಂತಿ ಉಂಟಾಗಲಿದೆ ಸಮಾಜದ ಶಾಂತಿ ಒಗ್ಗಟ್ಟನ್ನು ಮುರಿಯುವ ಇಂತವರ ವಿರುದ್ಧ ಸ್ವಯಂ ಪ್ರೇರಿತರಾಗಿ ಅಧಿಕಾರಿಗಳು ಕೇಸು ದಾಖಲಿಸಬೇಕು ಎಂದು ಅವರು ಹೇಳಿದರು. ಮುಸ್ಲಿಂ ಸಮುದಾಯದ ಜನಪ್ರತಿನಿದಿಗಳು ವಿಧಾನಸಭೆಯೊಳಗೆ ಧ್ವನಿ ಎತ್ತಬೇಕು ಇಲ್ಲವಾದರೆ ಅಂತವರು ಮುಸ್ಲಿಮ್ ಸಮುದಾಯದ ನಾಯಕರೆಂದು ಹೇಳಲು ಯಾವ ನ್ಯೆತಿಕ ಹಕ್ಕಿದೇ ಎಂದು ಅವರು ಪ್ರಶ್ನಿಸಿದರು.
ಪ್ರವಾದಿ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ. ಆದರೆ, ಪೊಲೀಸ್ ಇಲಾಖೆ ಮಾತ್ರ ಈ ಪ್ರಕರಣವನ್ನು ಲಘುವಾಗಿ ಪರಿಘಣಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಜರಗಿಸಿಲ್ಲ ಎಂದು ದೂರಿದರು ಈ ಬಗ್ಗೆ ಪೊಲೀಸ್ ಇಲಾಖೆ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಇದರ ವಿರುದ್ಧ ಹೋರಾಟ ಅನಿವಾರ್ಯ ಏಂದು ಅವರು ನುಡಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ