ಮುಡಿಪು: ಹೊಸ ವರ್ಷಾಚರಣೆಯ ನೆಪದಲ್ಲಿ ದೇಶಾದ್ಯಂತ ಡಿಸೆಂಬರ್ 31 ರಂದು ಅತ್ಯಧಿಕ ಮದ್ಯ ಮಾರಾಟವಾಗುವುದು ಸಾಮಾನ್ಯ.ಆ ಹಿನ್ನೆಲೆಯಲ್ಲಿ ಮದ್ಯದಿಂದಾಗುವ ತೊಂದರೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯದ ಎಲ್ಲಾ ಡಿವಿಷನ್ ಕೇಂದ್ರದ ಮುಖ್ಯ ಬೀದಿಗಳಲ್ಲಿ ಟೀಮ್ ಹಸನೈನ್ ಮದ್ಯ ವಿರುದ್ದ ವಿದ್ಯಾರ್ಥಿ ರ್ಯಾಲಿ ಹಾಗೂ ಡಿವಿಷನ್ ನ ಪ್ರಮುಖ ಪಟ್ಟಣಗಳಲ್ಲಿ ಮದ್ಯದ ವಿರುದ್ದ ಸಂದೇಶ ಭಾಷಣ ಮಾಡಲು ನಿರ್ದೇಶಿಸಿದ ಭಾಗವಾಗಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ನ ಎಸ್ಸೆಸ್ಸೆಫ್ ಟೀಮ್ ಹಸನೈನ್ ಮದ್ಯ ವಿರುದ್ದ ವಿದ್ಯಾರ್ಥಿ ರ್ಯಾಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆಯಲ್ಲಿ ಮುಡಿಪುವಿನಲ್ಲಿ ನಡೆಯಿತು.

ಸಂಬಾರ ತೋಟದಿಂದ ಮುಡಿಪು ಜಂಕ್ಷನ್ ತನಕ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಟೀಮ್ ಹಸನೈನ್ ಸಕ್ರೀಯ ಕಾರ್ಯಕರ್ತರಿಂದ ಮದ್ಯ ವಿರುದ್ದ ವಿದ್ಯಾರ್ಥಿ ರ್ಯಾಲಿ ನಡೆಯಿತು.

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಟೀಮ್ ಹಸನೈನ್ ಗೈಡ್ ತೌಸೀಫ್ ಸ ಅದಿ ಹರೇಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮದಲ್ಲಿ ಸಂದೇಶ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನಿರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ಮಾಡಿದರು
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಸಯ್ಯದ್ ಖುಬೈಬ್ ತಂಙಳ್,ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ, ಎಸ್ಸೆಸ್ಸೆಫ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಶರೀಫ್ ಮುಡಿಪು ,ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಖತೀಬರಾದ ಅಬ್ದುಲ್ ರಹ್ಮಾನ್ ಮದನಿ ಮಧ್ಯನಡ್ಕ,ಆಸಿಫ್ ಸಖಾಫಿ ಮುಡಿಪು,ಡಿವಿಷನ್ ಸದಸ್ಯರಾದ ನೌಫಲ್ ಪರೀದ್ ನಗರ,ಇಕ್ಬಾಲ್ ಮಧ್ಯನಡ್ಕ,ಸಿದ್ದೀಕ್ ಸಖಾಫಿ ಕಾಯಾರ್,ಅಝೀಝ್ ಎಚ್.ಕಲ್,ಜಾಫರ್ ಅಳೇಕಲ,ಮೊಯಿದಿನ್ ಮೋರ್ಲ,ಶರೀಫ್ ಸ ಅದಿ ಸಂಬಾರತೋಟ,ಸಿದ್ದೀಕ್ ಕೊಮರಂಗಳ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಸ್ವಾಗತಿಸಿದರು.ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ