ಇಸ್ಲಾಮ್ ಮತ್ತು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮ್ ರವರ ಬಗ್ಗೆ ಸುವರ್ಣ ನ್ಯೂಸ್ ನ ಚಾನೆಲ್ ನ ನಿರೂಪಕ ಅಜಿತ್ ಹನುಮಕ್ಕನವರು ನೀಡಿರುವ ಹೇಳಿಕೆ ಯನ್ನು ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಖಂಡನೆ ವ್ಯಕ್ತಪಡಿಸುತ್ತಿದೆ.
ಶ್ರೀರಾಮನ ಬಗ್ಗೆ ಚರ್ಚೆ ನಡೆಸುವಾಗ ರಾಮನನ್ನು ಸಮರ್ಥಿಸಲು ಬೇಕಾದ ಹಿಂದೂ ಧರ್ಮದ ಅದಾರ ಗಳನ್ನು ಮುಂದಿಟ್ಟು ಭಗವಾನ್ ನ ವಾದವನ್ನು ಬಾಲಿಶಮಾಡಬಹುದಿತ್ತು, ಅದನ್ನು ಬಿಟ್ಟು “ಕೈಲಾಗದವ ಮೈ ಪರಚಿ ಕೊಂಡ” ಎಂಬ ನಾಣ್ಣುಡಿಯಂತೆ ಇಸ್ಲಾಮ್ ನ ಮೇಲೆ ಎರಗಿದ ಇವರ ನಿಲುವು ಇವರಿಗಿರುವ ಮಾಧ್ಯಮ ಧರ್ಮದ ಸಾಮಾನ್ಯ ಜ್ಞಾನ ವನ್ನು ಎತ್ತಿ ತೋರಿಸುತ್ತಿದೆ . ಕನಿಷ್ಠ ಹಿಂದೂ ಧರ್ಮದ ಇತಿಹಾಸದವಾದರೂ ತಿಳಿದಿರುತ್ತಿದ್ದರೆ ಇಂತಹ ಹೇಳಿಕೆಯನ್ನು ಇವರು ಖಂಡಿತವಾಗಿಯೂ ನೀಡುತ್ತಿರಲಿಲ್ಲ.
ಅರೆಬರೆ ಧಾರ್ಮಿಕ ಅರಿವು ಹಾಗೂ ಸಾಮಾಜಿಕ ಪ್ರಜ್ಞೆ ಹೊಂದಿರುವ ಇವರನ್ನು ತಕ್ಷಣ ಇಂತಹ ಜವಾಬ್ದಾರಿಯುತ ವೃತ್ತಿಯಿಂದ ವಜಾಗೊಳಿಸಬೇಕಾಗಿ ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಆಗ್ರಹಿಸುತ್ತಿದೆ. ಈ ಬಗ್ಗೆ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಸನ್ನಿವೇಶಗಳಿಗೆ ಅವಕಾಶ ಕೊಡಬಾರದೆಂಬ ಬೇಡಿಕೆಯೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕತಾರ್ ರಾಷ್ಟ್ರೀಯ ಸಮಿತಿಯು ರಾಜ್ಯದ ಮಾನ್ಯ ಮಂತ್ರಿಗಳಾದ ಶ್ರೀ ಯುತ ಕುಮಾರ ಸ್ವಾಮಿ, ಗ್ರಹ ಸಚಿವರಾದ ಎಂ ಬಿ ಪಾಟೀಲ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ