janadhvani

Kannada Online News Paper

ಪ್ರವಾದಿ (ಸ.ಅ) ನಿಂದನೆ- ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ನಿಂದ ಉಳ್ಳಾಲ ಠಾಣೆಯಲ್ಲಿ ದೂರು ದಾಖಲು

ಉಳ್ಳಾಲ: ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕಿನ್ಯ ಸೆಕ್ಟರ್ ಸಮಿತಿಯ ಅಧ್ಯಕ್ಷರಾದ ಇರ್ಫಾನ್ ನೂರಾನಿಯವರ ನೇತ್ರತ್ವದಲ್ಲಿ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಸೈಯದ್ ತ್ವಾಹ ಮೀಂಪ್ರಿ, ಫಯಾಝ್ ಕಿನ್ಯ, ಉಸ್ಮಾನ್ ಝುಹ್ರಿ ಕುರಿಯ, ಮೂಸಕುಂಞ ಬದ್ರಿಯನಗರ, ಸನಾಹು ಕೂಡಾರ, ಅಯ್ಯೂಬ್ ಖುತುಬಿನಗರ, ಬಶೀರ್ ಕೂಡಾರ, ಆಶಿಕ್ ಮೀಂಪ್ರಿ, ಫಯಾಝ್ ಉಕ್ಕುಡ, ರಿಝ್ವಾನ್ ಮೀಂಪ್ರಿ, ಮೊಯಿದಿನ್ ಮೀಂಪ್ರಿ, ಸಫ್ವಾನ್ ಮೀಂಪ್ರಿ ಮುಂತಾದ ನಾಯಕರು ಉಪಸ್ಥಿತರಿದ್ದರು.

ವರದಿ:ಫಯಾಝ್ ಕಿನ್ಯ