ಕಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ವತಿಯಿಂದ ರಾಷ್ಟ್ರೀಯ ಮಟ್ಟದ ಆರು ಝೋನ್ ಗಳನ್ನು ( ಮಸ್ಕತ್, ಸೊಹಾರ್, ಸೀಬ್, ನಿಝ್ವ, ಬುರೈಮಿ, ಸಲಾಲ)
ಒಳಗೊಂಡ ಪ್ರತಿಭೋತ್ಸವವು ಮತ್ತು ಕೆಸಿಎಫ್ ಅಂತರಾಷ್ಟ್ರೀಯ ಸಮ್ಮಿಟ್ ಜಾಬಿರ್ ಫಾರ್ಮ್ ಹೌಸ್ ಬರ್ಕದಲ್ಲಿ ಇನ್ ಶಾ ಅಲ್ಲಾ ಜನವರಿ 11 ರಂದು ನಡೆಯಲಿದೆ. ಕೆಸಿಎಫ್ ಒಮಾನ್ ರಾಷ್ಟ್ರೀಯ ಅಧ್ಯಕ್ಷ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಇವರ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದ ಉದ್ಘಾಟನೆ ಯನ್ನು ದಕ್ಷಿಣ ಕನ್ನಡ ಉಡುಪಿ ಸಂಯುಕ್ತ ಖಾಝಿ ಶೈಖುನಾ ತಾಜುಲ್ ಫುಖಹಾ಼ಹ಼್
ಅಲ್ ಹಾಜ್ ಬೇಕಲ ಇಬ್ರಾಹಿಮ್ ಮುಸ್ಲಿಯಾರ್ ಇವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ತಾಜುಲ್ ಫುಖಹಾಹ್ ಬೇಕಲ ಉಸ್ತಾದ್ ಮತ್ತು ಡಾಕ್ಟರೇಟ್ ಪದವಿ ಪಡೆದ ಝೈನಿ ಉಸ್ತಾದ್ ರವರಿಗೆ ಸನ್ಮಾನ ಹಾಗೂ ಅಸ್ಸುಫ ತರಗತಿಯ ಎರಡನೇ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸರ್ಟಿಫಿಕೇಟ್ ವಿತರಣೆ ಕಾರ್ಯಕ್ರಮವು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಹಂಝ ಸಖಾಫಿ ಉಸ್ತಾದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಈಶ್ವರಮಂಗಿಲ, ಕೊಶಾಧಿಕಾರಿ ಹಾಜಿ ಶೈಖ್ ಬಾವ ಮಂಗಳೂರು, ಸಂಘಟನಾ ಅಧ್ಯಕ್ಷ ಡಾ. ಅಬ್ದುಲ್ ರಶೀದ್ ಝೈನಿ ಖಾಮಿಲ್ ಸಖಾಫಿ ಉಸ್ತಾದ್, ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ,
ಎಜುಕೇಶನ್ ವಿಭಾಗದ ಅಧ್ಯಕ್ಷ ಡಿ.ಪಿ.ಯೂಸುಫ್ ಸಖಾಫಿ ಬೈತಾರ್, ಎಜುಕೇಶನ್ ವಿಭಾಗದ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ, ಇಹ್ಸಾನ್ ವಿಭಾಗದ ಕಾರ್ಯದರ್ಶಿ ರಹೀಮ್ ಸಅದಿ, ಪ್ರಕಾಶನ ವಿಭಾಗದ ಕಾರ್ಯದರ್ಶಿ ಪಿ.ಪಿ. ನಝೀರ್ ಹಾಜಿ ಕಾಶಿಪಟ್ನ, ಆಡಳಿತ ವಿಭಾಗದ ಅಧ್ಯಕ್ಷ ಉಮರ್ ಸಖಾಫಿ ಮಿತ್ತೂರು, ಆಡಳಿತ ವಿಭಾಗ ಕಾರ್ಯದರ್ಶಿ ಹುಸೈನ್ ಮುಸ್ಲಿಯಾರ್ ಎಮ್ಮೆಮ್ಮಾಡ್, ಸಾಂತ್ವನ ವಿಭಾಗದ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಸದಸ್ಯರಾದ ಅಝೀಝ್ ಮುಸ್ಲಿಯಾರ್ ಮಲೇಷ್ಯಾ, ಉಸ್ಮಾನ್ ಹಾಜಿ ದುಬೈ, ಅಲಿ ಮುಸ್ಲಿಯಾರ್ ಬಹರೈನ್ ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಫ್ಯಾಮಿಲಿ ಮೀಟ್ ಮತ್ತು ಮಹಿಳೆಯರ ಮತ್ತು ಮಕ್ಕಳ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮ ನಡೆಯಲಿದೆ .















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ