ಅಲ್ ಮಫಾಝ್ ಮೂಡಬಿದ್ರೆ ಮುಲಾಖಾತ್ 2019 ಕಾರ್ಯಕ್ರಮ ರಿಯಾದ್ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಹೊಸಂಗಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಬೀಬ್ ಟಿ.ಎಚ್ ರವರು ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಮುಸ್ತಫಾ ಸಅದಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಅಲ್ ಮಫಾಝ್ ಟ್ರಸ್ಟ್ ನ ಕಾರ್ಯಕ್ರಮ ಅಭಿನಂದನಾರ್ಹ ಎಂದರು. ನಂತರ ಸಂಸ್ಥೆಯ ಸಾರಥಿ ಪಿ. ಪಿ. ಅಹ್ಮದ್ ಸಖಾಫಿಯವರು ಸಂಸ್ಥೆಯ ಕಾರ್ಯಚಟುವಟಿಕೆ, ಸಮಾಜ ಸೇವೆ ಹಾಗೂ ಮೂಡಬಿದ್ರೆ ಪರಿಸರಕ್ಕೆ ಇರುವ ಅವಶ್ಯಕತೆಯನ್ನು ವಿವರವಾಗಿ ತಿಳಿಸಿದರು.

ರಿಯಾದ್ ಸಮಿತಿ ಹಾಗೂ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಮುಂಚೂಣಿ ನಾಯಕರಾಗಿ ಕಾರ್ಯ ನಿರ್ವಹಿಸಿದ್ದ ಹಂಝ ಮೈಂದಾಳ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಅತಿಥಿಗಳಾಗಿ ಅಬ್ದುಲ್ ಅಝೀಝ್ ಬಜ್ಪೆ, ಮಲ್ಜ ಶರೀಫ್ ಮದನಿ, ಮರ್ಕಝುಲ್ ಹುದಾ ಶರೀಫ್ ಅಮಾನಿ, ನ್ಯೂ ಸನಯ್ಯ ಅಬ್ದುಲ್ ರಹ್ಮಾನ್ ಮದನಿ, ಇಲ್ಯಾಸ್ ಲತೀಫಿ, ತಾಜುಸ್ಸುನ್ನ ಅನಸ್ ಸಅದಿ ಭಾಗವಹಿಸಿದರು. ಮಫಾಝ್ ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿನಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಉಸ್ತಾದರ ದುವಾ ಹಾಗೂ ರಿಯಾದ್ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಹೊಸಂಗಡಿಯವರ ಧನ್ಯವಾದಗಳೊಂದಿಗೆ ಕಾರ್ಯಕ್ರಮ ಮೂರು ಸ್ವಲಾತಿನೊಂದಿಗೆ ಮುಕ್ತಾಯವಾಯಿತು.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ