ಅಲ್ ಮಫಾಝ್ ಮೂಡಬಿದ್ರೆ ಮುಲಾಖಾತ್ 2019 ಕಾರ್ಯಕ್ರಮ ರಿಯಾದ್ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಹೊಸಂಗಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಬೀಬ್ ಟಿ.ಎಚ್ ರವರು ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಮುಸ್ತಫಾ ಸಅದಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ಅಲ್ ಮಫಾಝ್ ಟ್ರಸ್ಟ್ ನ ಕಾರ್ಯಕ್ರಮ ಅಭಿನಂದನಾರ್ಹ ಎಂದರು. ನಂತರ ಸಂಸ್ಥೆಯ ಸಾರಥಿ ಪಿ. ಪಿ. ಅಹ್ಮದ್ ಸಖಾಫಿಯವರು ಸಂಸ್ಥೆಯ ಕಾರ್ಯಚಟುವಟಿಕೆ, ಸಮಾಜ ಸೇವೆ ಹಾಗೂ ಮೂಡಬಿದ್ರೆ ಪರಿಸರಕ್ಕೆ ಇರುವ ಅವಶ್ಯಕತೆಯನ್ನು ವಿವರವಾಗಿ ತಿಳಿಸಿದರು.

ರಿಯಾದ್ ಸಮಿತಿ ಹಾಗೂ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಮುಂಚೂಣಿ ನಾಯಕರಾಗಿ ಕಾರ್ಯ ನಿರ್ವಹಿಸಿದ್ದ ಹಂಝ ಮೈಂದಾಳ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಅತಿಥಿಗಳಾಗಿ ಅಬ್ದುಲ್ ಅಝೀಝ್ ಬಜ್ಪೆ, ಮಲ್ಜ ಶರೀಫ್ ಮದನಿ, ಮರ್ಕಝುಲ್ ಹುದಾ ಶರೀಫ್ ಅಮಾನಿ, ನ್ಯೂ ಸನಯ್ಯ ಅಬ್ದುಲ್ ರಹ್ಮಾನ್ ಮದನಿ, ಇಲ್ಯಾಸ್ ಲತೀಫಿ, ತಾಜುಸ್ಸುನ್ನ ಅನಸ್ ಸಅದಿ ಭಾಗವಹಿಸಿದರು. ಮಫಾಝ್ ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿನಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಉಸ್ತಾದರ ದುವಾ ಹಾಗೂ ರಿಯಾದ್ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಹೊಸಂಗಡಿಯವರ ಧನ್ಯವಾದಗಳೊಂದಿಗೆ ಕಾರ್ಯಕ್ರಮ ಮೂರು ಸ್ವಲಾತಿನೊಂದಿಗೆ ಮುಕ್ತಾಯವಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ