ರಿಯಾದ್: ಅಲ್ ಮಫಾಝ್ ಚಾರಿಟೇಬಲ್ ಟ್ರಸ್ಟ್ (ರಿ) ಮೂಡುಬಿದ್ರಿ ಇದರ ರಿಯಾದ್ ಸಮಿತಿ ಸಭೆಯು ನಝೀರ್ ಕಾಶಿಪಟ್ಣರವರ ನಿವಾಸದಲ್ಲಿ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಅಬ್ದುಲ್ ಹಮೀದ್ ಹೊಸಂಗಡಿಯವರ ಅಧ್ಯಕ್ಷತೆಯಲ್ಲಿ 06/01/2019 ಆದಿತ್ಯವಾರ ರಾತ್ರಿ ಸಂಸ್ಥೆಯ ಸಾರಥಿ ಪಿ.ಪಿ. ಅಹ್ಮದ್ ಸಖಾಫಿಯವರ ಗಣ್ಯ ಉಪಸ್ಥಿತಿಯಲ್ಲಿ ನಡೆಯಿತು.
ರಿಯಾದ್ ನೂತನ ಸಮಿತಿಯ ಗೌರವಾಧ್ಯಕ್ಷರುಗಳಾಗಿ ನಝೀರ್ ಕಾಶಿಪಟ್ಣ ಹಾಗೂ ಕರೀಮ್ ಲತೀಫಿ ಆಯ್ಕೆಯಾದರು. ಅಧ್ಯಕ್ಷರಾಗಿ ಸಂಘ ಸಂಸ್ಥೆಗಳ ಸಕ್ರಿಯ ನಾಯಕ ಹಂಝ ಮೈಂದಾಳ ಹಾಗೂ ಉಪಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಗಂಟಲ್ಕಟ್ಟೆರವರು ಸರ್ವಾನುಮತದಿಂದ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಳಾಗಿ ಇಕ್ಬಾಲ್ ನೀರಳಿಕೆ, ಜೊತೆ ಕಾರ್ಯದರ್ಶಿ ಅಲ್ತಾಫ್ ನೀರಳಿಕೆ, ಕೋಶಾಧಿಕಾರಿಯಾಗಿ ಅಬ್ದುಲ್ ಖಾದರ್ ಸಾಲೆತ್ತೂರು ರವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ಸಿತಾರ್, ಹಬೀಬ್ ಟಿ.ಎಚ್., ಅಶ್ರಫ್ ಕಿಲ್ಲೂರು, ಹಸನ್ ಸಾಗರ್, ನಿಝಾಮ್ ಸಾಗರ್, ಇಸ್ಮಾಯಿಲ್ ಕನ್ನಂಗಾರ್, ತಕ್ವೀದ್ ನೀರಳಿಕೆ, ಮುನೀರ್ ಬಜಾಲ್, ಶರೀಫ್ ಕೊಲ್ಪೆ, ಶಾಫಿ ಹೊಸಂಗಡಿ, ರಹೀಮ್ ಮಂಗಳೂರು ಟೂರ್ಸ್ ರವರನ್ನು ಆರಿಸಲಾಯಿತು.
ನಂತರ ಮಫಾಝ್ ರಿಯಾದ್ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಹೊಸಂಗಡಿ, ನೂತನ ಅಧ್ಯಕ್ಷ ಹಂಝ ಮೈಂದಾಳ ಹಾಗೂ ಹಿರಿಯ ವಿದ್ವಾಂಸ ಪಿ.ಪಿ. ಅಹ್ಮದ್ ಸಖಾಫಿಯವರು ನೂತನ ಸಮಿತಿಗೆ ಶುಭಾಶಯ ಕೋರಿದರು.
ಕೊನೆಯಲ್ಲಿ ಅಶ್ರಫ್ ಕಿಲ್ಲೂರು ರವರ ಧನ್ಯವಾದ ಹಾಗೂ 3 ಸ್ವಲಾತಿನೊಂದಿಗೆ ಸಭೆ ಕೊನೆಗೊಳಿಸಲಾಯಿತು















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು