ದೆಹಲಿ: ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ರಾಷ್ಟ್ರೀಯ ಸಮ್ಮೇಳನದ ಪ್ರಚಾರಾರ್ಥ ಕಾಶ್ಮೀರದಿಂದ ಕೇರಳ ತನಕ ನಡೆಸಲಾಗುವ “ಸಫರ್ ಹಿಂದ್” ರಾಷ್ಟ್ರೀಯ ಪರ್ಯಟನೆಗೆ ಜ.11 ಶುಕ್ರವಾರದಂದು ಕಾಶ್ಮೀರದ ಹಝ್ರತ್ ಬಾಲ್ ಮಸೀದಿಯಲ್ಲಿ ಚಾಲನೆ ನೀಡಲಾಗುವುದು. 28 ದಿನಗಳ ಕಾಲ ನಡೆಯುವ ಪರ್ಯಟನೆಯು 22 ರಾಜ್ಯಗಳ 40 ಕೇಂದ್ರಗಳಲ್ಲಿ ಸಮಾವೇಶಗೊಳ್ಳಲಿದ್ದು, 13,000 ಕಿ.ಮೀ. ಕ್ರಮಿಸಲಿದೆ. ಫೆ.3ರಿಂದ 6 ರವರೆಗೆ ಕರ್ನಾಟಕದಲ್ಲಿ ಪರ್ಯಟನೆ ನಡೆಸಲಿದ್ದು, ರಾಜ್ಯದ ಹುಬ್ಬಳ್ಳಿ, ಬಳ್ಳಾರಿ, ಬೆಂಗಳೂರು, ಮಂಗಳೂರು ಮತ್ತು ಮೈಸೂರುಗಳಲ್ಲಿ ಸಮಾವೇಶಗೊಳ್ಳಲಿದೆ. ಫೆ.7ರಂದು ಕೇರಳದ ಕಲ್ಲಿಕೋಟೆಯಲ್ಲಿ ಸಮಾರೋಪಗೊಳ್ಳಲಿದ್ದು, ಸುನ್ನಿ ಉಲಮಾ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಭಾಗವಹಿಸುವರು.
ಯಾತ್ರೆಯನ್ನು ಎಸ್ ಎಸ್ ಎಫ್ ರಾಷ್ಟ್ರೀಯ ನಾಯಕರಾದ ಮೌಲಾನಾ ಶೌಕತ್ ಬುಖಾರಿ ಕಾಶ್ಮೀರ, ಡಾ. ಫಾರೂಖ್ ನಈಮಿ, ಕೆ.ಎಂ. ಅಬೂಬಕರ್ ಸಿದ್ದೀಕ್, ಝುಹೈರುದ್ದೀನ್ ನೂರಾನಿ ಕೋಲ್ಕತಾ, ಸಾಲಿಕ್ ಲತೀಫಿ ಅಸ್ಸಾಮ್ ಮೊದಲಾದವರು ಮುನ್ನಡೆಸುವರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ