ದೆಹಲಿ: ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ರಾಷ್ಟ್ರೀಯ ಸಮ್ಮೇಳನದ ಪ್ರಚಾರಾರ್ಥ ಕಾಶ್ಮೀರದಿಂದ ಕೇರಳ ತನಕ ನಡೆಸಲಾಗುವ “ಸಫರ್ ಹಿಂದ್” ರಾಷ್ಟ್ರೀಯ ಪರ್ಯಟನೆಗೆ ಜ.11 ಶುಕ್ರವಾರದಂದು ಕಾಶ್ಮೀರದ ಹಝ್ರತ್ ಬಾಲ್ ಮಸೀದಿಯಲ್ಲಿ ಚಾಲನೆ ನೀಡಲಾಗುವುದು. 28 ದಿನಗಳ ಕಾಲ ನಡೆಯುವ ಪರ್ಯಟನೆಯು 22 ರಾಜ್ಯಗಳ 40 ಕೇಂದ್ರಗಳಲ್ಲಿ ಸಮಾವೇಶಗೊಳ್ಳಲಿದ್ದು, 13,000 ಕಿ.ಮೀ. ಕ್ರಮಿಸಲಿದೆ. ಫೆ.3ರಿಂದ 6 ರವರೆಗೆ ಕರ್ನಾಟಕದಲ್ಲಿ ಪರ್ಯಟನೆ ನಡೆಸಲಿದ್ದು, ರಾಜ್ಯದ ಹುಬ್ಬಳ್ಳಿ, ಬಳ್ಳಾರಿ, ಬೆಂಗಳೂರು, ಮಂಗಳೂರು ಮತ್ತು ಮೈಸೂರುಗಳಲ್ಲಿ ಸಮಾವೇಶಗೊಳ್ಳಲಿದೆ. ಫೆ.7ರಂದು ಕೇರಳದ ಕಲ್ಲಿಕೋಟೆಯಲ್ಲಿ ಸಮಾರೋಪಗೊಳ್ಳಲಿದ್ದು, ಸುನ್ನಿ ಉಲಮಾ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಭಾಗವಹಿಸುವರು.
ಯಾತ್ರೆಯನ್ನು ಎಸ್ ಎಸ್ ಎಫ್ ರಾಷ್ಟ್ರೀಯ ನಾಯಕರಾದ ಮೌಲಾನಾ ಶೌಕತ್ ಬುಖಾರಿ ಕಾಶ್ಮೀರ, ಡಾ. ಫಾರೂಖ್ ನಈಮಿ, ಕೆ.ಎಂ. ಅಬೂಬಕರ್ ಸಿದ್ದೀಕ್, ಝುಹೈರುದ್ದೀನ್ ನೂರಾನಿ ಕೋಲ್ಕತಾ, ಸಾಲಿಕ್ ಲತೀಫಿ ಅಸ್ಸಾಮ್ ಮೊದಲಾದವರು ಮುನ್ನಡೆಸುವರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ