ಮುಡಿಪು : ಜನವರಿ 27 ರಂದು ಬೆಂಗಳೂರಿನ ಖುದ್ದೂಸ್ ಈದ್ಗಾ ಮೈದಾನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣೆ ಮತ್ತು 26 ಹಾಗೂ 27ರಂದು ನಡೆಯುವ ಉಂದುಲುಸ್ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶದ ಪ್ರಚಾರಾರ್ಥ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ “ಡಿವಿಶನ್ ಪಬ್ಲಿಸಿಟಿ ಕನ್ವೆನ್ಶನ್” ಮುಡಿಪುವಿನ ಮಜ್ಲಿಸ್ ಎಜ್ಯು ಪಾರ್ಕ್ ನಲ್ಲಿ ನಡೆಯಿತು.


ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರು ಅಧ್ಯಕ್ಷತೆ ವಹಿಸಿದ್ದರು. ಡಿವಿಶನ್ ಉಪಾಧ್ಯಕ್ಷ ಸಿದ್ದೀಕ್ ಸಖಾಫಿ ಕಾಯಾರ್ ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್ ಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ನಾಯಕರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಮಾಲ್ ಸಖಾಫಿ ರವರನ್ನು ಸನ್ಮಾನಿಸಲಾಯಿತು.
ಮುಡಿಪು ಡಿವಿಶನ್ ಕೋಶಾಧಿಕಾರಿ ಶರೀಫ್ ಮುಡಿಪು, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ, ಜೊತೆ ಕಾರ್ಯದರ್ಶಿ ಮೊಯ್ದಿನ್ ಮೋರ್ಲ,ಉಳ್ಳಾಲ ಡಿವಿಶನ್ ಮಾಜಿ ನಾಯಕರಾದ ಶರೀಫ್ ಸಅದಿ ಅರಫಾ, ಅಝೀಝ್ ಎಚ್ಕಲ್, ಹಾಗೂ ಮುಡಿಪು ಡಿವಿಶನ್ ಡಿವಿಶನ್ ನಾಯಕರು, ಸೆಕ್ಟರ್- ಶಾಖಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಡಿವಿಶನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನೌಫಲ್ ಫರೀದ್ನಗರ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ