janadhvani

Kannada Online News Paper

ಮುಸ್ಲಿಂ ಜಮಾಅತ್ ಸಮಾವೇಶ ಯಶಸ್ವಿ ಗೊಳಿಸಲು ರಾಜ್ಯ ಎಸ್.ವೈ.ಎಸ್.ಕರೆ

ಮಂಗಳೂರು: ಮುಸ್ಲಿಮ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಜ.27ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ನಡೆಯಲಿರುವ “ಕರ್ನಾಟಕ ಮುಸ್ಲಿಂ ಜಮಾಅತ್” ಘೋಷಣಾ ಸಮಾವೇಶ ನಡೆಯಲಿದೆ.

ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಸಮಾವೇಶವನ್ನು ಉದ್ಘಾಟಿಸಲಿದ್ದು, ದೇಶದ ಪ್ರಮುಖ ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸುನ್ನೀ ಯುವಜನ ‌ಸಂಘ ಕರ್ನಾಟಕ ರಾಜ್ಯಾದ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಹಾಗೂ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ವಿನಂತಿಸಿ ಕೊಂಡಿದ್ದಾರೆ.

error: Content is protected !! Not allowed copy content from janadhvani.com