ಬನ್ನೂರು: ಎಸ್ಸೆಸ್ಸೆಫ್ ಬನ್ನೂರು ಶಾಖೆಯ ವತಿಯಿಂದ ಎಸ್ಸೆಸ್ಸೆಫ್ ರಾಜ್ಯಸಮಿತಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಹಾಫಿಲ್ ಸುಫಿಯಾನ್ ಸಖಾಫಿಯವರಿಗೆ ಅಭಿನಂಧನಾ ಕಾರ್ಯಕ್ರಮವು ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿಯವರ ಅಧ್ಯಕ್ಷತೆಯಲ್ಲಿ ಬನ್ನೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪ್ರಥಮವಾಗಿ ರಾಜ್ಯದ ಒಂದನೇ ಶಾಖೆಯಲ್ಲಿ ಸನ್ಮಾನ ಸ್ವೀಕರಿಸಲು ಸಂತೋಷವಾಗುತ್ತಿದೆ ಎಂದರಲ್ಲದೆ, ಇಖ್ಲಾಸ್ ನಿಂದ ಕೂಡಿದ ಕಾರ್ಯ ಚಟುವಟಿಕೆ ನಮ್ಮದಾಗಬೇಕು ಎಂದರು.
ನಮ್ಮ ಕಾರ್ಯಾಚರಣೆಗಳು ಊರಿನ ಜಾತಿ,ಮತ ನೋಡದೆ ಪ್ರತಿಯೊಂದು ವರ್ಗಕ್ಕೂ ತಲುಪಬೇಕು ಆ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ಕಾರ್ಯಪ್ರವ್ರತ್ತರಾಗಬೇಕು ಎಂದರು. ಅನಾವಶ್ಯಕ ಚಟುವಟಿಕೆಗಳಿಂದ ದೂರ ಇದ್ದು ಒಳಿತಿನ ಹಾದಿಗೆ ಮುನ್ನುಗ್ಗಿ ಮಾದರೀ ಯುವ ಸಮೂಹ ನಾವಾಗಬೇಕೆಂದರು.

ಎಸ್ಸೆಸ್ಸೆಫ್ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಾಫಿಲ್ ಸುಫಿಯಾನ್ ಸಖಾಫಿ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ನವಾಝ್ ಭಟ್ಕಳ ರವರನ್ನು ಬನ್ನೂರು ಶಾಖಾ ಕಾರ್ಯಕರ್ತರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಬನ್ನೂರು ಶಾಖಾ ಉಪಾಧ್ಯಕ್ಷರಾದ ಹನೀಫ್,ಕಾರ್ಯದರ್ಶಿ ಹಕ್ಕ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಶಾಖಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಸ್ವಾಗತಿಸಿ ಖಾದಿಸಿಯ್ಯ ಕಾವಲ್ ಕಟ್ಟೆ ವಿದ್ಯಾರ್ಥಿ ಬನ್ನೂರು ಶಾಖಾ ಸದಸ್ಯರಾದ ಮುಹಮ್ಮದ್ ಫಾರೂಕ್ ವಂದಿಸಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ವತಿಯಿಂದ ಜನವರಿ 10 ರಿಂದ ಫೆಬ್ರವರಿ 7 ರ ತನಕ ನಡೆಯಲಿರುವ ಹಿಂಧ್ ಸಫರ್ ಯಾತ್ರೆ ಫೆಬ್ರವರಿ 5 ರಂದು ಪುತ್ತೂರು ತಲುಪಲಿದ್ದು ಈ ಕಾರ್ಯಕ್ರಮ ವನ್ನು ಯಶಸ್ವಗೊಳಿಸಲು ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ