ಫೆಬ್ರವರಿ 23, 24ರಂದು ಭಾರತದ ರಾಜಧಾನಿ ದೆಹಲಿಯಲ್ಲಿ ನಡೆಯುವ ಎಸ್ಸೆಸ್ಸೆಫ್ ನ್ಯಾಶನಲ್ ಕಾನ್ಫರೆನ್ಸ್ ಪ್ರಚಾರಾರ್ಥ ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷರಾದ ಮೌಲಾನಾ ಡಾ. ಶೌಕತ್ ಅಲಿ ನಈಮಿ ಅಲ್ ಬುಖಾರಿ ರವರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂದ್ ಸಫರ್ ಭಾರತ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಫೆಬ್ರವರಿ 5ರಂದು ಪುತ್ತೂರಿನಲ್ಲಿ ಸ್ವೀಕರಣ ಕಾರ್ಯಕ್ರಮ ಮುಗಿಸಿ ರಾತ್ರಿ 11 ಗಂಟೆಗೆ ಸುಳ್ಯ ತಲುಪಿದ ರಾಷ್ಟ್ರೀಯ ಎಸ್ಸೆಸ್ಸೆಫ್ ನಾಯಕರಿಗೆ ಸುಳ್ಯ ಕೇಂದ್ರ ಜುಮಾ ಮಸೀದಿ ಮುಂಭಾಗದಲ್ಲಿ ಹೂ ಗುಚ್ಚ ನೀಡಿ ಸ್ವಾಗತಿಸಲಾಯಿತು. ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷರಾದ ಮೌಲಾನಾ ಡಾ. ಶೌಕತ್ ಅಲಿ ನಈಮಿ ಅಲ್ ಬುಖಾರಿ ಕಾಶ್ಮೀರ, ಪ್ರ. ಕಾರ್ಯದರ್ಶಿ ಕೆ.ಎಂ ಅಬೂಬಕರ್ ಸಿದ್ದೀಕ್, ಕೋಶಾಧಿಕಾರಿ ಝುಹೈರುದ್ದೀನ್ ನೂರಾನಿ ಪ.ಬಂಗಾಳ್, ಕ್ಯಾಂಪಸ್ ಕಾರ್ಯದರ್ಶಿ ಸಯ್ಯದ್ ಸಜ್ಜಾದ್ ಅಲಿ ಕಾಶ್ಮೀರ, ಉಪಾಧ್ಯಕ್ಷರಾದ ಸ್ವಾದಿಕ್ ಆಲಂ ಮಿಸ್ಬಾಹಿ ಆಸ್ಸಾಂ ಮುಂತಾದ ನಾಯಕರು ಉಪಸ್ಥಿತರಿದ್ದರು.
ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಎಸ್.ಎಂ.ಎ ಸುಳ್ಯ ನ್ ಕೋಶಾಧಿಕಾರಿ ಮುಹ್ಯುದ್ದೀನ್ ಹಾಜಿ ಶಾಂತಿನಗರ, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕಿ ರವರ ನೇತೃತ್ವದಲ್ಲಿ ಹಿಂದ್ ಸಫರ್ ನಾಯಕರನ್ನು ಸ್ವೀಕರಿಸಲಾಯಿತು. ಎಸ್.ವೈ.ಎಸ್, ಎಸ್ಸೆಸ್ಸೆಫ್ ಕಾರ್ಯಕರ್ತರು ತ್ರಿವರ್ಣ ಪತಾಕೆಯೊಂದಿಗೆ ನಾಯಕರನ್ನು ಸ್ವೀಕರಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ