ಕಲ್ಲಿಕೋಟೆ.ಫೆ,07: ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಆಯೋಜಿಸಿದ್ದ “ಸಹಿಷ್ಣುತೆ ಹಾಗೂ ಸಾಕ್ಷರತೆಯ ಭಾರತ”ಎಂಬ ಉದಾತ್ತ ಸಂದೇಶದೊಂದಿಗೆ ಕಾಶ್ಮೀರದಿಂದ ಕೇರಳದವರೆಗೆ ನಡೆಸಿದ ಹಿಂದ್ ಸಫರ್ ಕೇರಳದಲ್ಲಿ ಜನಸಾಗರದ ಒಗ್ಗೂಡುವಿಕೆಯೊಂದಿಗೆ ಸಮಾಪ್ತಿಗೊಂಡಿತು.

ಜ.12 ರಂದು ಜಮ್ಮು ಕಾಶ್ಮೀರದ ಹಝ್ರತ್ ಬಾಲ್ ಮಸ್ಜಿದ್ ಪರಿಸರದಿಂದ ಆರಂಭ ಗೊಂಡ ಯಾತ್ರೆಯು ಸುದೀರ್ಘವಾದ 27 ದಿನಗಳಲ್ಲಿ 22 ರಾಜ್ಯಗಳಲ್ಲಿ ಬರೋಬ್ಬರಿ 14000 ಕಿ.ಮೀ ಕ್ರಮಿಸಿ ಬಂದ ಹಿಂದ್ ಸಫರ್ ಯಾತ್ರೆಯು ಭಾರತ ಮಣ್ಣಿನಲ್ಲಿ ಹೊಸ ಆಶಾಭಾವನೆಯೊಂದನ್ನು ಮೂಡಿಸಿದ್ದು ಮಾತ್ರ ಸುಳ್ಳಲ್ಲ. ಹಿಂದ್ ಸಫರ್ ಕ್ರಮಿಸಿದ ಹಾದಿಗಳಲ್ಲೆಲ್ಲಾ ಅಭೂತಪೂರ್ವವಾದ ಸ್ವಾಗತ, ಸ್ಪಂದನೆ ವ್ಯಕ್ತವಾಗುತ್ತಿತ್ತು.

ಕಾಶ್ಮೀರ, ಪಂಜಾಬ್,ಉತ್ತರಾಖಂಡ, ರಾಜಸ್ಥಾನ, ಜಾರ್ಖಂಡ್, ಒಡಿಶಾ, ತೆಲಂಗಾಣ, ಆಂದ್ರಪ್ರದೇಶ, ದೆಹಲಿ, ಹರ್ಯಾಣ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಮಣಿಪುರ, ಗೋವಾ, ಕರ್ನಾಟಕ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ 39 ಸ್ವೀಕರಣಾ ಸಮಾರಂಭಗಳಲ್ಲಿ ಭಾಗವಹಿಸಿ ಫೆ.7ರಂದು ಕೇರಳಕ್ಕೆ ತಲುಪಿತು.ಫೆ.23,24 ದಿನಾಂಕಗಳಲ್ಲಿ ದೆಹಲಿಯ ರಾಂಲೀಲಾ ಮೈದಾನದಲ್ಲಿ ನಡೆಯುವ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಾವೇಶದ ಅಂಗವಾಗಿ “ಹಿಂದ್ ಸಫರ್” ಯಾತ್ರೆಯನ್ನು ಆಯೋಜಿಸಲಾಗಿತ್ತು.

ಸಮಾರೋಪ ಸಮ್ಮೇಳನವನ್ನು ಅಖಿಲಭಾರತ ಉಲಮಾ ಒಕ್ಕೂಟದ ಪ್ರ.ಕಾರ್ಯದರ್ಶಿ, ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಉದ್ಘಾಟಿಸಿದರು.ಸಮಸ್ತ ಉಪಾಧ್ಯಕ್ಷರಾದ ಬಹು:ಸಯ್ಯಿದ್ ಅಲಿ ಬಾಫಖೀ ತಂಙಳ್ ದುಆ ನೆರವೇರಿಸಿ,ಕೇರಳ ಮುಸ್ಲಿಂ ಜಮಾಅತ್ ಪ್ರ.ಕಾರ್ಯದರ್ಶಿ ಸಯ್ಯಿದ್ ಖಲೀಲುಲ್ ಬುಖಾರಿ ಅಧ್ಯಕ್ಷತೆ ವಹಿಸಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ