ಬೆಂಗಳೂರು(ಫೆ. 08): ಇವತ್ತು ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಐವರು ಶಾಸಕರು ಗೈರಾಗಿದ್ದಾರೆ. ಇವರಲ್ಲಿ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಬಿ. ನಾಗೇಂದ್ರ ಮತ್ತು ಮಹೇಶ್ ಕುಮಟಳ್ಳಿ ಅವರಿದ್ದಾರೆ.
ಈಗಲ್ಟರ್ ರೆಸಾರ್ಟ್ನಲ್ಲಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರೂ ಈ ಸಭೆಗೆ ಬಂದಿಲ್ಲ. ಇವರನ್ನು ಬಿಟ್ಟು ಉಳಿದವರೆಲ್ಲರೂ ಸಿಎಲ್ಪಿ ಸಭೆಗೆ ಆಗಮಿಸಿದ್ದಾರೆಂದು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇವತ್ತು ಗೈರಾಗಿದ್ದ ನಾಲ್ವರು ಅತೃಪ್ತ ಶಾಸಕರು ಕಳೆದ ತಿಂಗಳು ನಡೆದಿದ್ದ ಸಿಎಲ್ಪಿ ಸಭೆಗೂ ಬಂದಿರಲಿಲ್ಲ. ಈ ನಾಲ್ವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಿಪ್ ಉಲ್ಲಂಘನೆ ಹಾಗೂ ಪಕ್ಷಾಂತರ ಕಾಯ್ದೆ ಅನ್ವಯ ಇವರನ್ನು ಅನರ್ಹಗೊಳಿಸಲು ತೀರ್ಮಾನಿಸಲಾಗಿದೆ. ಒಂದು ವೇಳೆ, ಇವರು ಅನರ್ಹಗೊಂಡರೆ ಮುಂದಿನ 6 ವರ್ಷಗಳ ಕಾಲ ಚುನಾವಣೆ ಎದುರಿಸುವಂತಿಲ್ಲ.
ಇದೇ ವೇಳೆ, ಇನ್ನಷ್ಟು ಅತೃಪ್ತರು ಕೈಜಾರದಂತೆ ತಡೆಯಲು ಕಾಂಗ್ರೆಸ್ ಬೇರೊಂದು ಪ್ಲಾನ್ ಮಾಡಿದೆ. ಸಮ್ಮಿಶ್ರ ಸರಕಾರದ ಸಂಪುಟದಿಂದ ನಾಲ್ವರು ಹಿರಿಯ ಸಚಿವರ ಸ್ಥಾನಕ್ಕೆ ಹೊಸ ಮುಖಗಳಿಗೆ ಅವಕಾಶ ಕೊಡಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಮೂಲಗಳು ತಿಳಿಸಿರುವಂತೆ ಹಿರಿಯರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ ಮತ್ತು ಯುಟಿ ಖಾದರ್ ಅವರು ಸಚಿವ ತ್ಯಾಗ ಮಾಡಲಿದ್ದಾರೆ. ಇವರ ಬದಲು ಅತೃಪ್ತರ ಸಾಲಿನಲ್ಲಿರುವ ಹಾಗೂ ಅಸಮಾಧಾನಿತಗೊಂಡಿರುವ ಶಾಸಕರಾದ ಬಿ.ಸಿ. ಪಾಟೀಲ್, ಬಸನಗೌಡ ದದ್ದಲ್, ಅಜಯ್ ಸಿಂಗ್ ಮೊದಲಾದವರನ್ನ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಸಮಾಲೋಚನೆ ನಡೆಸಿ ಈ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ