ದಮಾಂ: ದೇಶದ ವಾಣಿಜ್ಯ ಸಂಸ್ಥೆಗಳು ಮತ್ತಿತರ ಕಡೆ ಜಾರಿಗೆ ತರಲಾದ ಸ್ವದೇಶೀಕರಣದ ಬಗ್ಗೆ ಮತ್ತೊಮ್ಮೆ ವಿಮರ್ಶೆ ನಡೆಸಲಾಗುವುದು ಎಂದು ಕಾರ್ಮಿಕ, ಸಾಮಾಜಿಕ ಕ್ಷೇಮ ಖಾತೆಯ ಸಚಿವ ಇಂಜಿನಿಯರ್ ಅಹ್ಮದ್ ಸುಲೈಮಾನ್ ಅಲ್ ರಾಜಿಹ್ ವ್ಯಕ್ತಪಡಿಸಿದ್ದಾರೆ.
ಟೆಕ್ಸ್ಟೈಲ್, ಆಟೋಮೊಬೈಲ್, ವಾಹನ ಮಾರಾಟ, ಪಾತ್ರೆಗಳು, ಪೀಠೋಪಕರಣ, ಕಚೇರಿ, ಬೇಕರಿ ಉತ್ಪನ್ನಗಳು ಮತ್ತು ಮಿಠಾಯಿ ಅಂಗಡಿಗಳು ಸೇರಿದಂತೆ ಹನ್ನೆರಡು ವಲಯಗಳಲ್ಲಿ ಎಪ್ಪತ್ತು ಶೇಕಡಾ ಸ್ವದೇಶೀಕರಣವನ್ನು ಇತ್ತೀಚೆಗೆ ಜಾರಿಗೆ ತರಲಾಗಿತ್ತು.
ಆದರೆ ಪರಿಚಯಸ್ಥರಾದ ಮೂಲ ನಿವಾಸಿಗಳು ಲಭಿಸದ ಕಾರಣ ಅನೇಕ ಸಂಸ್ಥೆಗಳನ್ನು ಮುಚ್ಚಲಾಯಿತು. ಈ ಸಂದರ್ಭದಲ್ಲಿ ಹಲವಾರು ಸ್ಥಾಪನೆಗಳ ಮಾಲಿಕರು ದೇಶೀಕರಣದ ಪ್ರಮಾಣವನ್ನು ಮರುಪರಿಶೀಲನೆ ನಡೆಸುವಂತೆ ಸಚಿವರೊಂದಿಗೆ ಕೇಳಿಕೊಂಡಿದ್ದರು.
ಪ್ರಮಾನವನ್ನು ಐವತ್ತು ಶೇಕಡಾ ಆಗಿ ನಿಗದಿಪಡಿಸುವಿರಾ ಎಂಬ ಪ್ರಶ್ನೆಗೆ ತಾವು ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದವರು ಹೇಳಿದರು.
ಪ್ರತೀ ವಿಭಾಗದಲ್ಲಿ ಎಷ್ಟು ಕಡಿತಗೊಳಿಸಬೇಕು ಎಂಬುದನ್ನೂ ತೀರ್ಮಾನಿಸಲಾಗುವುದು. ಯಾವ ವಿಭಾಗ ಎಂಬುದನ್ನು ಈಗ ಹೇಳಲಾಗದು ಎಂದ ಸಚಿವರು, ಖಾಸಗಿ ವಲಯದ ಸ್ಥಾಪನೆಗಳ ಮಾಲಕರೊಂದಿಗೆ ಚರ್ಚಿಸಿದ ಬಳಿಕ ತೀರ್ಮಾನಕ್ಕೆ ಬರಲಾಗುವುದು ಎಂದರು.
ಮಾರಾಟ ವಲಯದಲ್ಲಿ ಶೇಕಡಾ ಎಪ್ಪತ್ತು ಶೇಕಡಾ ದೇಶೀಕರಣವನ್ನು ಜಾರಿಗೆ ತಂದ ಕಾರಣ ಭಾರತೀಯರು ಸಮೇತ ಅನೇಕರು ತಮ್ಮ ಕೆಲಸವನ್ನು ಕಳಕೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು