ಬೆಂಗಳೂರು: ಶಾಸಕರು ಖರೀದಿಗೆ ಇರುವ ವಸ್ತುಗಳು ಅಂತ ಎಲ್ಲರಿಗೂ ಭಾವನೆ ಬಂದುಬಿಟ್ಟಿದೆ. ಇಂತಹ ಭಾವನೆ ಅಪಾಯಕರ. ಶಾಸಕರ ಖರೀದಿ ಶಾಶ್ವತವಾಗಿ ನಿಲ್ಲುವಂತಾಗಬೇಕು. ಅದಕ್ಕಾಗಿಯೇ ಆಡಿಯೊ ಪ್ರಕರಣವನ್ನು ಎಸ್ಐಟಿಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿಗೆ ಪ್ರಾಮಾಣಿಕ ಅಧಿಕಾರಿಗಳ ನೇಮಕ ಮಾಡಲಾಗುವುದು ಎಂದು ಹೇಳಿದರು.
ಪ್ರಾಮಾಣಿಕ ಅಧಿಕಾರಿಗಳಿಂದ ಆಡಿಯೊ ಪ್ರಕರಣದ ತನಿಖೆ ನಡೆಯಲಿದೆ. ಅಧಿಕಾರಿಗಳು ಯಾರದ್ದೇ ಪ್ರಭಾವಕ್ಕೂ ಒಳಗಾಗಬೇಡಿ ಎಂದು ಸೂಚಿಸುತ್ತೇನೆ. ಸ್ವತಃ ಮುಖ್ಯಮಂತ್ರಿ ಆಗಿರುವ ನನ್ನ ಪ್ರಭಾವಕ್ಕೂ ಅಧಿಕಾರಿಗಳು ಒಳಗಾಗಲ್ಲ ಎಂದರು.
ರಾಜ್ಯದಲ್ಲಿ ಶಾಸಕರ ಖರೀದಿ ಪ್ರಕರಣಗಳು ಮರುಕಳಿಸದಂತೆ ತನಿಖೆ ಮಾಡಲು ಸೂಚಿಸುತ್ತೇನೆ ಎಂದು ಸಿಎಂ ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ