ದುಬೈ : ಅನ್ವಾರುಲ್ ಹುದಾ ಯುಎಇ ಸಮಿತಿ ಆಶ್ರಯದಲ್ಲಿ ಅಸ್ಮಾಹುಲ್ ಹುಸ್ನಾ ವಾರ್ಷಿಕೋತ್ಸವ ಮತ್ತು ಸಂಗಮ ದುಬೈ ದೇರಾ ಪರ್ಲ್ ಕ್ರೀಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಅನ್ವಾರುಲ್ ಹುದಾ ಯುಎಇ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಹಾಜಿ ಕೊಂಡಂಗೇರಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ವಾರುಲ್ ಹುದಾ ಪ್ರಧಾನ ಕಾರ್ಯದರ್ಶಿ ಬಹು ಅಶ್ರಫ್ ಅಹ್ಸನಿ ಮುಖ್ಯ ಭಾಷಣ ಮಾಡಿದರು. ಕೆಸಿಎಫ್ ದುಬೈ ಸೌತ್ ಝೋನ್ ಹಂಗಾಮಿ ಅಧ್ಯಕ್ಷರಾದ ಶಾಹುಲ್ ಹಮೀದ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೊಡಗು ಸುನ್ನಿ ವೆಲ್ಫೇರ್ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ, ನಿರ್ದೇಶಕರುಗಳಾದ ಜಲೀಲ್ ನಿಝಾಮಿ ಎಮ್ಮೆಮಾಡು, ಉಸ್ಮಾನ್ ಹಾಜಿ ನಾಪೋಕ್ಲು ಶುಭ ಹಾರೈಸಿ ಭಾಷಣ ಮಾಡಿದರು.

ಕಾರ್ಯಕ್ರಮಕ್ಕೆ ಮೊದಲು ಶಂಸು ಎಮ್ಮೆಮಾಡು ತಂಡದಿಂದ ಆಕರ್ಷಕ ಬುರ್ದಾ ಮಜ್ಲಿಸ್ ಮತ್ತು ಅನ್ವಾರುಲ್ ಹುದಾ ಯುಎಇ ಆರ್ಗನೈಸರ್ ಮುಹಮ್ಮದ್ ಅಲಿ ಮುಸ್ಲಿಯಾರ್ ಚಾಮಿಯಾಲ್ ಅಸ್ಮಾಹುಲ್ ಹುಸ್ನಾ ರಾತೀಬ್ ಗೆ ನೇತೃತ್ವ ನೀಡಿದರು. ಅನ್ವರುಲ್ ಹುದಾ ಯುಎಇ ಸಮಿತಿ ನಾಯಕರುಗಳಾದ ಅಹ್ಮದ್ ಚಾಮಿಯಾಲ್, ರಫೀಕ್ ಚಾಮಿಯಾಲ್, ಕೊಡಗು ವೆಲ್ಫೇರ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಶೂದ್ ಹಾಕತ್ತೂರು, ನಾಯಕರುಗಳಾದ ಅರಾಫತ್ ನಾಪೋಕ್ಲು, ಖಲೀಲ್ ಭಾಷಾ ಮಡಿಕೇರಿ, ಇರ್ಷಾದ್ ಕೊಂಡಂಗೇರಿ, ಹಂಝ ತೂಟೆಕ್ಸ್, ಅಲಿ ಮೂಳೂರು ಸೇರಿದಂತೆ ಹಲವು ಸಾಂಘಿಕ, ಸಾಮಾಜಿಕ ನಾಯಕರುಗಳು ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಭಾಗವಹಿಸಿದ ಒಬ್ಬರಿಗೆ ಪವಿತ್ರ ಉಮ್ರಾ ಯಾತ್ರೆಗಾಗಿ ಆಯ್ಕೆ ಮಾಡಿದಾಗ ಇಸ್ಮಾಯಿಲ್ ಕೊಮ್ಮೇತೋಡು ಅದೃಷ್ಟವಂತರಾಗಿ ಹೊರಹೊಮ್ಮಿದರು. ನಾಸಿರ್ ನಈಮಿ ಕಾರ್ಯಕ್ರಮ ನಿರೂಪಿಸಿದರು, ನಾಸಿರ್ ಸಅದಿ ಸ್ವಾಗತಿಸಿ ಅನ್ವರುಲ್ ಹುದಾ ಯುಎಇ ಪ್ರಧಾನ ಕಾರ್ಯದರ್ಶಿ ಸಲೀಂ ಗುಂಡಿಗೆರೆ ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ