ಬೆಂಗಳೂರು: ದೇಶದ ರಕ್ಷಣೆಗೆ ಬೆನ್ನೆಲುಬಾಗಿ ನಿಂತಿರುವ ನಮ್ಮ ಹೆಮ್ಮೆಯ ಅಮಾಯಕ ವೀರ ಸೈನಿಕರ ಮೇಲೆ ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, 40ಕ್ಕೂ ಹೆಚ್ಚು ವೀರ ಯೋಧರು ಹುತಾತ್ಮರಾಗಿರುವುದು ಖೇದಕರ ಹಾಗೂ ವಿಷಾಧನೀಯ.ಈ ದುಷ್ಕೃತ್ಯ ಅತ್ಯಂತ ಪೈಶಾಚಿಕವಾಗಿದ್ದು ಸುನ್ನೀ ಲೇಖಕರ ಬಳಗ ವಾಟ್ಸಾಪ್ ಗ್ರೂಪ್ ಇದನ್ನು ತೀವ್ರವಾಗಿ ಖಂಡಿಸುತ್ತಿದೆ.
ದೇಶವನ್ನು ವಿಭಜಿಸುವುದು ಲಜ್ಜೆಗೆಟ್ಟ ಭಯೋತ್ಪಾದಕರ ಉದ್ದೇಶವಾಗಿದೆ, ಇಂಥಹ ಕ್ರೂರ ಕೃತ್ಯವನ್ನು ನಾವು ಮರೆಯಲು ಸಾಧ್ಯವಿಲ್ಲ,ಯಾವುದೇ ದುಷ್ಟಶಕ್ತಿಯಿಂದಲೂ ಭಾರತೀಯರನ್ನು ಹತ್ತಿಕ್ಕಲು ಸಾಧ್ಯವಿಲ್ಲ.ನರ ರಾಕ್ಷಸ ಭಯೋತ್ಪಾದಕರ ಇಂತಹ ಕುಕೃತ್ಯಗಳಿಂದ ನಮ್ಮ ಸೈನಿಕರ ಆತ್ಮಸ್ಥೈರ್ಯವನ್ನು ಕಿಂಚಿತ್ತೂ ಕುಗ್ಗಿಸಲು ಸಾಧ್ಯವಿಲ್ಲ.
ವೀರಮರಣ ವರಿಸಿದ ಸಿಆರ್ಪಿಎಫ್ ಯೋಧರ ಪರಮೋನ್ನತ ಬಲಿದಾನವನ್ನು ದೇಶವು ಮರೆಯಲಾರದು, ಅವರ ತ್ಯಾಗವು ವ್ಯರ್ಥವಾಗದು, ದೇಶಕ್ಕಾಗಿ ಹುತಾತ್ಮರಾದ ವೀರಯೋಧರಿಗೆ ಚಿರಶಾಂತಿ ಲಭಿಸಲಿ, ಅವರ ಕುಟುಂಬಕ್ಕೆ ತಾಳ್ಮೆಯನ್ನು ಭಗವಂತನು ಕರುಣಿಸಲಿ ಎಂದು ಸುನ್ನೀ ಲೇಖಕರ ಬಳಗ ಹಾರೈಸಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ