ಬೆಂಗಳೂರು(ಫೆ. 16): ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮೊನ್ನೆ ಸಂಭವಿಸಿದ ಭೀಕರ ಉಗ್ರ ದಾಳಿ ಘಟನೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಫೆ. 19ಕ್ಕೆ ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ.
ಇವತ್ತು ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಪರ ಹೋರಾಟಗಾರ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಮುಖ್ಯಸ್ಥ ವಾಟಾಳ್ ನಾಗರಾಜ್ ಈ ವಿಚಾರ ತಿಳಿಸಿದ್ದಾರೆ. ಫೆಬ್ರುವರಿ 19ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ 12 ಗಂಟೆಗಳ ಬಂದ್ ಆಚರಿಸುವಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಈ ಬಂದ್ಗೆ ವಿವಿಧ ಕನ್ನಡಪರ ಸಂಘಟನೆಗಳ ಜೊತೆಗೆ ಕೆಎಸ್ಆರ್ಟಿಸಿಯ ಕಾರ್ಮಿಕ ಸಂಘಟನೆ ಕೂಡ ಬೆಂಬಲ ನೀಡಿದೆ.
ಫೆ. 19, ಮಂಗಳವಾರದಂದು ಬೆಳಗ್ಗೆ 10ಗಂಟೆಗೆ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಅಂದು ಹೋಟೆಲ್, ಖಾಸಗಿ ಬಸ್ಗಳು, ಶಿಕ್ಷಣ ಸಂಸ್ಥೆಗಳು, ಪೆಟ್ರೋಲ್ ಬಂಕ್ಗಳು, ಬಿಡಿಎ, ನಗರಸಭೆ, ಐಟಿ ಬಿಟಿ ಇತ್ಯಾದಿಗಳು ಮುಚ್ಚಬೇಕು. ಇಲ್ಲದಿದ್ದರೆ ಆಗುವ ಪರಿಣಾಮಕ್ಕೆ ತಾವು ಹೊಣೆಯಲ್ಲ ಎಂದು ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದ್ದಾರೆ.
ವಾಟಾಳ್ ನಾಗರಾಜು ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಾ.ರಾ. ಗೋವಿಂದು, ಕಮಾರ್ ಮೊದಲಾದ ಕನ್ನಡಪರ ಹೋರಾಟಗಾರರು ಪಾಲ್ಗೊಂಡಿದ್ದರು. ಸುದ್ದಿಗೋಷ್ಠಿಗೆ ಮುನ್ನ ಹೋರಾಟಗಾರರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಯೋಧರ ಮೇಲೆ ನಡೆದಿರುವ ದಾಳಿಗೆ ಇಡೀ ಭಾರತ ದೇಶವೇ ಕಣ್ಣೀರಿಡುತ್ತಿದೆ. ಇದಕ್ಕೆ ಪ್ರತೀಕಾರ ತೀರಿಸಲೇಬೇಕು. ರಾಯಭಾರಿಯನ್ನು ವಾಪಸ್ ಕರೆಸಿಕೊಂಡ ಮಾತ್ರಕ್ಕೆ ಪ್ರಯೋಜನವಿಲ್ಲ. ಅಮೆರಿಕವು ಬಿನ್ ಲಾಡೆನ್ ಅವರನ್ನು ಹುಡುಕಿ ನುಗ್ಗಿ ಹೊರತೆಗೆದಂತೆ ಭಾರತೀಯರು ಉಗ್ರರನ್ನು ಹುಡುಕಿ ಹೊಡೆಯಬೇಕು. ಪ್ರಧಾನಿ ಅವರು ಪ್ರತೀಕಾರದ ಮಾತನಾಡಿದ್ದಾರೆ. ನಮ್ಮ ಕಣ್ಣೀರು ಆರುವ ಮುನ್ನವೇ ಪ್ರತೀಕಾರ ಆಗಲೇಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ