ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಲೋಕಸಭಾ ಚುನಾವಣೆ ಮೇಲೆ ಇದೆ. ಪುಲ್ವಾಮಾದಲ್ಲಿನ ಉಗ್ರರ ದಾಳಿಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.
ಮತಗಳಿಸುವುದು ಹೇಗೆ ಎಂಬ ಯೋಚನೆ ಅವರಲ್ಲಿದೆ. ಹಾಗಾಗಿಯೇ ದಾಳಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದಾರೆ. ಇಂತಹ ವಿಷಯಗಳಲ್ಲಿ ಹೀಗೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಾತನಾಡುತ್ತಿದ್ದಾರೆ. ನಿರ್ದಿಷ್ಟ ದಾಳಿ ನಡೆಸಿ ಪ್ರಚಾರ ಪಡೆದುಕೊಂಡರಷ್ಟೇ. ಇವರು ಪಾಕಿಸ್ತಾನವನ್ನು ಏನಾದ್ರೂ ಮಟ್ಟ ಹಾಕಿದರಾ? ಹಾಗೆ ನೋಡಿದರೆ ಮೋದಿ ಸರ್ಕಾರದ ಅವಧಿಯಲ್ಲೇ ಆತಂಕವಾದಿಗಳ ಉಪಟಳ ಹೆಚ್ಚಾಗಿದೆ ಎಂದು ಗುಂಡೂರಾವ್ ದೂರಿದರು.
ದೇಶದಲ್ಲಿ ಇರುವ ಪ್ರತಿಯೊಬ್ಬರೂ ದೇಶ ಪ್ರೇಮಿಗಳೇ. ಆದರೆ, ಬಿಜೆಪಿಯವರು ಮಾತೆತ್ತಿದರೆ ನಾವೇ ದೇಶ ಪ್ರೇಮಿಗಳು ಎನ್ನುತ್ತಾರೆ. ಕೆಲ ಸಂಘಟನೆಗಳಂತೂ ದೇಶಪ್ರೇಮವನ್ನು ಗುತ್ತಿಗೆಗೆ ತೆಗೆದುಕೊಂಡತೆ ವರ್ತಿಸುತ್ತಿವೆ. ಈ ಮೂಲಕ ದೇಶದಲ್ಲಿ ದ್ವೇಷದ ವಾತಾವರಣ ಮೂಡಿಸುತ್ತಿವೆ ಎಂದೂ ಟೀಕಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ