janadhvani

Kannada Online News Paper

ಸೌದಿ ಜೈಲುಗಳಲ್ಲಿರುವ ಭಾರತೀಯರ ಬಿಡುಗಡೆ- ಬಿನ್ ಸಲ್ಮಾನ್ ಘೋಷಣೆ

ನವದೆಹಲಿ,ಫೆ.20: ಸೌದಿ ಆರೇಬಿಯಾದ ವಿವಿಧ ಜೈಲುಗಳಲ್ಲಿರುವ 850 ಭಾರತೀಯರನ್ನು ಬಿಡುಗಡೆ ಗೊಳಿಸಲಾಗುವುದು ಎಂದು ಸೌದಿ ಅರೇಬಿಯಾ ತಿಳಿಸಿದೆ.

ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸೌದಿ ದೊರೆ ಮುಹಮ್ಮದ್ ಬಿನ್ ಸಲ್ಮಾನ್ ಈ ಕಾರ್ಯವನ್ನು ಘೋಷಿಸಿದ್ದಾರೆ. 2084 ಭಾರತೀಯರು ಸೌದಿ ಅರೇಬಿಯಾದ ವಿವಿಧ ಜೈಲುಗಳಲ್ಲಿರುವುದಾಗಿ ಈ ಹಿಂದೆ ಸರಕಾರ ವ್ಯಕ್ತಪಡಿಸಿತ್ತು.

ಭಾರತೀಯ ಹಜ್ ಕೊಟಾ ಹೆಚ್ಚಳ

ಸೌದಿ ಅರೇಬಿಯಾ ಬುಧವಾರ ಭಾರತದ ಹಜ್ ಕೋಟಾದಲ್ವಿ 25,000 ಏರಿಕೆ ಮಾಡಿದೆ. ಇದರೊಂದಿದೆ ದೇಶದಿಂದ ಹಜ್ ಯಾತ್ರೆಗೆ ಹೋಗುವವರ ಸಂಖ್ಯೆ ವಾರ್ಷಿಕ 2 ಲಕ್ಷಕ್ಕೆ ಏರಿಕೆಯಾಗಿದೆ.

ಭಾರತಕ್ಕೆ ಭೇಟಿ ನೀಡಿದ ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಘೋಷಣೆ ಮಾಡಿದೆ.

ಏರಿಕೆಯಾದ ಕೋಟಾ ಸಾಗಾಟ ಹಾಗೂ ಇತರ ಅಂಶಗಳನ್ನು ಅವಲಂಬಿಸಿ ಅನುಷ್ಠಾನಗೊಳಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ (ಆರ್ಥಿಕ ವ್ಯವಹಾರ) ಟಿ.ಎಸ್. ಗುರುಮೂರ್ತಿ ಹೇಳಿದ್ದಾರೆ. ಈ ಕೋಟಾ ಈ ವರ್ಷದಿಂದ ಅಸ್ತಿತ್ವಕ್ಕೆ ಬರಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

ಭಾರತ ಮತ್ತು ಸೌದಿ ಮಧ್ಯೆ ವೈಮಾನಿಕ ಸೇವೆಯನ್ನು ಹೆಚ್ಚಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಅನಿವಾಸಿಗಳಿಗೆ ಇದು ಹೆಚ್ಚು ಅನುಕೂಲವಾಗಲಿದೆ.

  • ಭಯೋತ್ಪಾದನೆ ಮತ್ತು ಉಗ್ರವಾದ ಸಮಸ್ಯೆಗಳ ನಿವಾರಣೆ ನಿಟ್ಟಿನಲ್ಲಿ ಸಮಾನ ಕಾಳಜಿ ವಹಿಸಿದ್ದು, ಮುಂದಿನ ಜನಾಂಗದ ಸುರಕ್ಷತೆ ಖಾತರಿಪಡಿಸಿಕೊಳ್ಳಲು ಭಾರತ ಹಾಗೂ ನೆರೆಯ ರಾಷ್ಟ್ರಗಳಿಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಈ ವಿಚಾರದಲ್ಲಿ ಭಾರತ ವಹಿಸಿರುವ ಪಾತ್ರವನ್ನು ಪ್ರಶಂಸಿಸುತ್ತೇವೆ. ಗುಪ್ತಚರ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಭಾರತಕ್ಕೆ ಸಹಕಾರ ನೀಡಲಿದ್ದೇವೆ– ಸೌದಿ ದೊರೆ ಸಲ್ಮಾನ್‌

  • ಯಾವುದೇ ರೀತಿಯೂ ಭಯೋತ್ಪಾದನೆಗೆ ಬೆಂಬಲ ನೀಡದಿರುವ ಬಗ್ಗೆ ನಾವು ಒಮ್ಮತಕ್ಕೆ ಬಂದಿದ್ದೇವೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಷ್ಟ್ರಗಳ ಮೇಲೆ ಒತ್ತಡ ಹೇರಬೇಕಾದುದು ಅವಶ್ಯವಾಗಿದೆ. ಉಗ್ರ ಸಂಘಟನೆಗಳಿಗೆ ನೀಡುತ್ತಿರುವ ಬೆಂಬಲ ಕೊನೆಯಾಗಿಸುವುದು, ಭಯೋತ್ಪಾದನೆ ಅವಕಾಶಗಳಿಗೆ ಅಂತ್ಯ ಹಾಡುವುದು; ಈ ಮೂಲಕ ಯುವ ಜನರು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳದಂತೆ ಮಾಡುವುದು…ಈ ಕುರಿತು ಸೌದಿ ಅರೇಬಿಯಾ ಭಾರತದ ಮಾತಿಗೆ ಸಮ್ಮತಿಸಿದೆ– ಪ್ರಧಾನಿ ನರೇಂದ್ರ ಮೋದಿ

  • ಇಂಧನ ಪಾಲುದಾರಿಕೆಯೊಂದಿಗೆ ತಂತ್ರ ಕುಶಲತೆಗಳಲ್ಲಿಯೂ ಒಪ್ಪಂದದ ಸಂಬಂಧವೂ ಮಾತುಕತೆ ನಡೆದಿದೆ. ಮೂಲಸೌಕರ್ಯಗಳಲ್ಲಿ ಸೌದಿ ಹೂಡಿಕೆಯನ್ನು ಸ್ವಾಗತಿಸಿದ್ದೇನೆ, ನಮ್ಮ ಸಂಬಂಧ ಕೇವಲ ಕೊಡು–ಕೊಳ್ಳುವಿಕೆ ಮಾತ್ರ ಸೀಮಿತವಾಗಿ ಉಳಿದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

  • ಶಿಷ್ಟಾಚಾರಗಳನ್ನು ಮುರಿದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸ್ವತಃ ಪ್ರಧಾನಿ ಮೋದಿ ಅಪ್ಪುಗೆಯೊಂದಿಗೆ ಸೌದಿ ದೊರೆಯನ್ನು ಬರಮಾಡಿಕೊಂಡಿದ್ದರು

  • ಭಾರತ ಮತ್ತು ಅರಬ್‌ ನಡುವಿನ ಸಂಬಂಧ ಡಿಎನ್‌ಎಯಲ್ಲಿ ಬೆರೆತಿದೆ ಎಂದು ಸೌದಿ ದೊರೆ ಸಲ್ಮಾನ್‌ ವರದಿಗಾರರಿಗೆ ಪ್ರತಿಕ್ರಿಯಿಸಿದ್ದರು

error: Content is protected !! Not allowed copy content from janadhvani.com