ನವದೆಹಲಿ(ಫೆ.23): ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರದ ವಿರುದ್ಧ ಹೋರಾಟಕ್ಕೆ ಸಿದ್ದರಾಗಿದ್ದಾರೆ.
ಮಾರ್ಚ್ 1 ರಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಿಎಂ ಕೇಜ್ರಿವಾಲ್ ಘೋಷಿಸಿದ್ದಾರೆ. ಅಲ್ಲದೇ ಈಗಾಗಲೇ ಹೋರಾಟಕ್ಕೆ ಭಾರೀ ಸಿದ್ದತೆ ನಡೆಸಿಕೊಂಡಿದ್ದು, ಯಾವುದೇ ಕಾರಣಕ್ಕೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಮುನ್ನೆಚ್ಚರಿಕಾ ಸಂದೇಶ ರವಾನಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ದೆಹಲಿಗೆ ಕೇಂದ್ರ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡುವವರೆಗೂ ಹೋರಾಟ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಈ ಬಾರಿ ನಮ್ಮ ಉಪವಾಸ ಸತ್ಯಾಗ್ರಹ ನಿಲ್ಲಿಸುವುದೇ ಇಲ್ಲ. ಈ ವಿಚಾರದಲ್ಲಿ ಹೋರಾಟಕ್ಕೂ ಸಿದ್ದ. ಹಾಗೆಯೇ ಸಾವನ್ನು ಎದುಸಿಲು ಸಿದ್ದ ಎಂದು ಸಿಎಂ ಕೇಜ್ರಿವಾಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ದೆಹಲಿಯನ್ನು ಸಂಪೂರ್ಣ ರಾಜ್ಯ ಎಂದು ಘೋಷಿಸಬೇಕು. ಸದ್ಯಕ್ಕೆ ನಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ಹೋರಾಟವೊಂದೇ ದಾರಿ. ನಾವು ತಳಮಟ್ಟದಲ್ಲಿ ಸಂಘಟನೆ ಕಟ್ಟುವ ಮೂಲಕ ಕೇಂದ್ರಕ್ಕೆ ಮೇಲೆ ಒತ್ತಡ ತರಲಿದ್ದೇವೆ. ಸಂಪೂರ್ಣ ರಾಜ್ಯದ ಸ್ಥಾನಮಾನಕ್ಕಾಗಿ ಬೀದಿಗಿಳಿಯಲೇ ಬೇಕು. ನಮಗೆ ಬೇರೆ ಯಾವುದೇ ದಾರಿಯಿಲ್ಲ. ನಮ್ಮ ಹಕ್ಕುಗಳಿಗಾಗಿ ನಾವು ಹೋರಾಟ ಮಾಡಬೇಕಿದೆ ಎಂದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ