ನವದೆಹಲಿ: ಏರ್ ಇಂಡಿಯಾದ ಮುಂಬೈ ನಿಯಂತ್ರಣ ಕೇಂದ್ರಕ್ಕೆ ಶನಿವಾರ ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಕರೆ ಬಂದಿದ್ದು, ನಂತರ ಭದ್ರತಾ ಕ್ರಮ ಕೈಗೊಳ್ಳಲಾಯಿತು ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.
ಬೆದರಿಕೆ ಕರೆ ಬರುತ್ತಿದ್ದಂತೆ ಜಾಗೃತಗೊಂಡ ನಾಗರಿಕ ವಿಮಾನಯಾನ ಭದ್ರತಾ ವಿಭಾಗ (ಬಿಸಿಎಎಸ್) ಎಲ್ಲಾ ವಿಮಾನಗಳಲ್ಲಿ ಭದ್ರತೆ ಕೈಗೊಳ್ಳುವಂತೆ ಕೇಂದ್ರಿಯ ಕೈಗಾರಿಕಾ ಪಡೆಗೆ ಆದೇಶಿಸಿತು.
‘ಏರ್ ಇಂಡಿಯಾದ ವಿಮಾನ ನಿಲ್ದಾಣ ಕಾರ್ಯಾಚರಣಾ ನಿಯಂತ್ರಣ ಕೇಂದ್ರಕ್ಕೆ ಸಂದೇಶವೊಂದು ಬಂದಿತ್ತು. ಅದರಲ್ಲಿ ಶನಿವಾರ ವಿಮಾನವನ್ನು ಪಾಕಿಸ್ತಾನಕ್ಕೆ ಅಪಹರಣ ಮಾಡುವುದಾಗಿ ಬೆದರಿಕೆ ಒಡ್ಡಲಾಗಿತ್ತು’ ಎಂದು ಬಿಸಿಎಎಸ್ ತಿಳಿಸಿದೆ.
ವಿಮಾನ ನಿಲ್ದಾಣ ಭದ್ರತಾ ಘಟಕ (ಎಪಿಎಸ್ಯು), ವಿಮಾನಯಾನ ಭದ್ರತಾ ಸಮೂಹ (ಎಎಸ್ಜಿ) ಮತ್ತು ಎಲ್ಲಾ ವಿಮಾನಗಳ ಕಾರ್ಯಾಚರಣಾ ಘಟಕಗಳಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು.
ಎಪಿಎಸ್ಯು ಮತ್ತು ಎಎಸ್ಜಿಗಳು ಕೇಂದ್ರಿಯ ಕೈಗಾರಿಕಾ ಪಡೆಯ ಭಾಗಗಳಾಗಿವೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ