ಹೊಸದಿಲ್ಲಿ, ಫೆ. 25: ಭಾರತದ ಸಂವಿಧಾನವು ಬಹುಸಂಖ್ಯಾತ- ಅಲ್ಪಸಂಖ್ಯಾತ ವ್ಯತ್ಯಾಸವಿಲ್ಲದೆ ಸರ್ವರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಆದರೆ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿಯುವ ಮೂಲಕ ಹಕ್ಕುಗಳನ್ನು ಅನುಭವಿಸುವುದರಲ್ಲಿ ವಿಫಲರಾಗುತ್ತಿದ್ದಾರೆ. ವಿದ್ಯಾಭ್ಯಾಸದಲ್ಲಿ ಮುಂದುವರಿಯುವ ಮೂಲಕ ಪ್ರಗತಿ ಸಾಧಿಸಲು ಸಮುದಾಯ ಪ್ರಯತ್ನಿಸುವುದರೊಂದಿಗೆ ಅದಕ್ಕೆ ಬೇಕಾದ ಪೂರಕ ವಾತಾವರಣವನ್ನು ಸರ್ಕಾರಗಳು ನಿರ್ಮಿಸಿ ಕೊಡಬೇಕು ಎಂದು ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮ್ಮೇಳನ ಸಮಾರೋಪವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿರಿಯ ನಾಯಕ ಸೈಯದ್ ಜಾವೇದ್ ಮನ್ನಾನ್ ಮಿಯಾ ಹಝ್ರತ್ ಬರೇಲ್ವಿ ಸಮ್ಮೇಳನ ಉದ್ಘಾಟಿಸಿದರು. ಸೈಯದ್ ಇಬ್ರಾಹೀಂ ಖಲೀಲುಲ್ ಬುಖಾರಿ, ಡಾ. ಹುಸೈನ್ ಸಖಾಫಿ, ಡಾ ಎಪಿ ಅಬ್ದುಲ್ ಹಕೀಂ ಅಝ್ಹರಿ, ಡಾ. ಫಾರೂಖ್ ನಯಿಮಿ ಮೊದಲಾದವರು ಮಾತನಾಡಿದರು.
ಎಸ್ಸೆಸ್ಸಫ್ ರಾಷ್ಟ್ರೀಯ ಕಾರ್ಯದರ್ಶಿ ಕೆಎಂ ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಕ್ಯಾಂಪಸ್ ಕಾರ್ಯದರ್ಶಿ ಸೈಯದ್ ಸಾಜಿದ್ ಬುಖಾರಿ ಕಾಶ್ಮೀರ ವಂದಿಸಿದರು.

ರಾಜ್ ಘಾಟ್ ನಿಂದ ರಾಮಲೀಲಾ ಮೈದಾನದವರೆಗೆ ಬೃಹತ್ ವಿದ್ಯಾರ್ಥಿ ಜಾಥಾ ನಡೆಯಿತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ