ನವದೆಹಲಿ, ಫೆ.26:- ಅಯೋಧ್ಯೆಯಲ್ಲಿಯ ಬಾಬರಿ ಮಸೀದಿ- ರಾಮಜನ್ಮಭೂಮಿ ಬಿಕ್ಕಟ್ಟನ್ನು ಮಧ್ಯವರ್ತಿಗಳ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಸುಪ್ರೀಂ ನ್ಯಾಯಪೀಠ ಇಂದು ಮತ್ತೊಮ್ಮೆ ಎರಡೂ ಪಕ್ಷಗಳಿಗೆ ಸಲಹೆ ನೀಡಿದೆ.
ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ನ್ಯಾಯಪೀಠ ಈ ಪ್ರಕರಣವನ್ನು ನ್ಯಾಯಾಲಯ ನೇಮಕದ ಮಧ್ಯವರ್ತಿಗೆ ವಹಿಸಬೇಕೆ ಎಂಬುದನ್ನು ಕುರಿತಂತೆ ಮಾರ್ಚ್ 5 ರಂದು ತೀರ್ಪು ನೀಡುವುದಾಗಿ ಹೇಳಿದೆ.ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ 5 ಮಂದಿ ನ್ಯಾಯಮೂರ್ತಿಗಳ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್. ಬೊಡ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಅಬ್ದುಲ್ ನಜೀರ್ ಅವರಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ತರ್ಜುಮೆ ಮಾಡಲು ನ್ಯಾಯಪೀಠ ನ್ಯಾಯಾಲಯದ ರಿಜಿಸ್ಟಾರ್ ಅವರಿಗೆ ಸೂಚಿಸಿದೆ. ಹಾಗೂ ಈ ಕಾರ್ಯ 6 ವಾರಗಳಲ್ಲಿ ಮುಗಿಸಲು ಗಡುವು ನೀಡಿದೆ.
ಇದೇ ವೇಳೆ, ಈ ಪ್ರಕರಣದ ಎರಡೂ ಕಕ್ಷಿದಾರರಿಗೆ, ತರ್ಜುಮೆಗೊಂಡ ದಾಖಲಾತಿಗಳನ್ನು ಪರಿಶೀಲಿಸಿ, ಅಭ್ಯಂತರಗಳಿದ್ದರೆ ಅದನ್ನು 8 ವಾರಗಳ ಒಳಗೆ ನ್ಯಾಯಾಲಯದ ಮುಂದಿಡಲೂ ನ್ಯಾಯಪೀಠ ಸೂಚಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ