janadhvani

Kannada Online News Paper

ಶಾಂತಿಯ ಪ್ರತೀಕವಾಗಿ ಅಭಿನಂದನ್ ಅವರನ್ನು ಬಿಡುಗಡೆ ಮಾಡುತ್ತೇನೆ – ಪಾಕ್ ಪ್ರಧಾನಿ

ಇಸ್ಲಾಮಾಬಾದ್: ಭಾರತದ ಪೈಲಟ್ ಅಭಿನಂದನ್ ಅವರು ಶುಕ್ರವಾರ ಅಧಿಕೃತವಾಗಿ ಬಿಡುಗಡೆಯಾಗಲಿದ್ದಾರೆ.
ಪಾಕಿಸ್ತಾನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್ ಅವರು ಉಭಯ ದೇಶಗಳ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ವೃದ್ದಿಸಲು ಮತ್ತು ಶಾಂತಿಯ ಸಂಕೇತವಾಗಿ ಫೈಲಟ್‌ ಅಭಿನಂದನ್‌ ಅವರನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದರು.

ಪಾಕಿಸ್ತಾನದ ಈ ನಡೆಯಿಂದಾಗಿ ಉಭಯ ದೇಶಗಳನ್ನು ನಡುವೆ ಉಂಟಾಗಿದ್ದ ಬಿಗುವಿನ ವಾತಾವರಣ ತಿಳಿಯಾಗುವ ಸಾಧ್ಯತೆಗಳಿವೆ. 

ಬುಧವಾರ ಪಾಕ್ ವಾಯುಸೇನೆ ಜೊತೆಗಿನ ಹೋರಾಟದಲ್ಲಿ ಮಿಗ್ ವಿಮಾನ ಪತನಗೊಂಡಿತ್ತು. ಈ ವಿಮಾನದಲ್ಲಿ ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ನೆಲಕ್ಕೆ ಧುಮುಕಿದ್ದರು.
ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶದಲ್ಲಿ ಬಿದ್ದಿದ್ದ ಅಭಿನಂದನ್ ಅವರನ್ನು ಪಾಕ್ ಸೇನೆ ಕಸ್ಟಡಿಗೆ ತೆಗೆದುಕೊಂಡಿತ್ತು. ಜಿನೀವಾ ಒಪ್ಪಂದ ಪ್ರಕಾರ ಪಾಕ್ ಸೇನೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲೇಬೇಕಿತ್ತು. ಹೀಗಾಗಿ ಪಾಕಿಸ್ತಾನ ಶುಕ್ರವಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಿದೆ.

ಏನಿದು ಜಿನೀವಾ ಒಪ್ಪಂದ..?
ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ವೇಳೆ ಒಪ್ಪಂದ ನಡೆದಿತ್ತು. ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.

error: Content is protected !! Not allowed copy content from janadhvani.com