ವಿಜಯಪುರ, ಮಾ.4- ಶಿವರಾತ್ರಿ ಹಿನ್ನಲೆ ದೇವರ ದರ್ಶನಕ್ಕೆ ಸರದಿ ಸಾಲಿನಲ್ಲಿ ಜನಸಾಮಾನ್ಯರು ನಿಂತಿದ್ದರೂ ಗೃಹಸಚಿವ ಎಂ.ಬಿ.ಪಾಟೀಲ್ ನೇರವಾಗಿ ದೇಗುಲ ದ ಒಳಪ್ರವೇಶಿಸಲು ಮುಂದಾಗುತ್ತಿದ್ದಂತೆ ವಿದ್ಯಾರ್ಥಿನಿಯೊರ್ವಳು ಸಚಿವರನ್ನೆ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ.
ತಮ್ಮದೇ ಒಡೆತನದಲ್ಲಿ ಇರುವ ಲಿಂಗದ ಗುಡಿಗೆ ಆಗಮಿಸಿದ ಸಚಿವರು, ಸರದಿ ಸಾಲಿನಲ್ಲಿ ನಿಲ್ಲದೇ ನೇರವಾಗಿ ಗರ್ಭಗುಡಿ ಪ್ರವೇಶಿಸಿದರು. ದರ್ಶನ ಪಡೆದು ವಾಪಸ್ ಬರುವ ವೇಳೆ ಸರದಿ ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿನಿ ನೇರವಾಗಿ ಗೃಹ ಸಚಿವರನ್ನು ಪ್ರಶ್ನಿಸಿಯೇ ಬಿಟ್ಟಳು.
ಏನ್ ಸಾರ್ ಒಂದು ಗಂಟೆಯಿಂದ ಸರದಿಯಲ್ಲಿ ನಿಂತಿದ್ದೇವೆ. ನೀವು ನೋಡಿದರೆ ಏಕಾಏಕಿ ಹೋಗುತ್ತಿದ್ದೀರಿ ಹೇಗೆ ಸರ್ ಎಂದು ಪ್ರಶ್ನಿಸಿದಳು. ವಿದ್ಯಾರ್ಥಿನಿಯ ಪ್ರಶ್ನೆಯಿಂದ ಮುಜುಗರಕ್ಕೊಳಗಾದ ಸಚಿವರು, ಇಲ್ಲ ಮಗು ನನಗೆ ಅರ್ಜೆಂಟ್ ಇದೆ, ಬೆಂಗಳೂರಿಗೆ ಹೋಗಬೇಕಾಗಿದೆ. ಕ್ಷಮಿಸು, ನನಗೂ ಸಾರ್ವಜನಿಕರ ಜತೆ ಬೆರೆಯುವ ಆಸೆ.
ಇದೇ ಕಾರಣಕ್ಕೆ ಗೃಹ ಸಚಿವನಾಗಿದ್ದರೂ ಪೊಲೀಸರ ಝೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ್ದೇನೆ. ಕ್ಷಮಿಸು ಎಂದು ವಿದ್ಯಾರ್ಥಿನಿಯನ್ನು ಸಮಾಧಾನಪಡಿಸಿ ಅಲ್ಲಿಂದ ನಿರ್ಗಮಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಧೈರ್ಯ ಮೆಚ್ಚಿ ಆಕೆಯೊಂದಿಗೆ ಕೆಲಕಾಲ ಉಭಯಕುಶಲೋಪರಿ ನಡೆಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್