ಪಾಟ್ನಾ, ಮಾ. 4: “ತಾನು ತೋಡಿದ ಗುಂಡಿಗೆ ತಾನೇ ಬೀಳುವುದು” ಎಂಬಂತೆ ಮಾರ್ಚ್ 3ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿನ ಉಪಸ್ಥಿತಿ ಯಾರು ಭಾರತ ಪರ ಹಾಗೂ ಯಾರು ಪಾಕಿಸ್ತಾನ ಪರ ಎಂಬುದನ್ನು ಸ್ಪಷ್ಟಪಡಿಸಲಿದೆ ಎಂದು ಪ್ರತಿಪಾದಿಸಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಸ್ವತಃ ತಾನೇ ರ್ಯಾಲಿಯಲ್ಲಿ ಪಾಲ್ಗೊಳ್ಳದೆ ಕಟು ಟೀಕೆಗೆ ಒಳಗಾಗಿದ್ದಾರೆ.
“ರ್ಯಾಲಿ ನಡೆಯುತ್ತಿರುವಂತೆಯೇ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್, ತನ್ನ ಲೋಕಸಭಾ ಕ್ಷೇತ್ರ ನವಾಡದಿಂದ ಪಾಟ್ನಾಕ್ಕೆ ಬರುತ್ತಿರುವಾಗ ಅನಾರೋಗ್ಯಕ್ಕೆ ಒಳಗಾದೆ ಎಂದಿದ್ದಾರೆ.
ರ್ಯಾಲಿಯಲ್ಲಿ ಭಾಗವಹಿಸಿದವರು ದೇಶದ್ರೋಹಿಗಳು ಎಂದು ಹೇಳಿಕೆ ನೀಡಿ ತಾನೇ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಗಿರಿರಾಜ್ ಸಿಂಗ್ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
“ರ್ಯಾಲಿಯಲ್ಲಿ ಪಾಲ್ಗೊಳ್ಳದೇ ಇರುವವರನ್ನು ದೇಶದ್ರೋಹಿಗಳು ಎಂದು ಪರಿಗಣಿಸುವ ಮಾನದಂಡವನ್ನೇ ಗಿರಿರಾಜ್ ಸಿಂಗ್ ಅವರಿಗೆ ಕೂಡ ಅನ್ವಯಿಸಬೇಕು. ಆದುದರಿಂದ ಅವರು ದೊಡ್ಡ ದೇಶದ್ರೋಹಿ. ದೇಶದ್ರೋಹಿ ಎಂದು ಪರಿಗಣಿಸಿರುವವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗುವುದು ಸಿಂಗ್ ಬೆದರಿಕೆ ಒಡ್ಡಿದ್ದರು. ಅವರು ಯಾವ ದೇಶದ ವೀಸಾಕ್ಕೆ ಅರ್ಜಿ ಸಲ್ಲಿಸುತ್ತಾರೆ” ಎಂದು ಪ್ರಶ್ನಿಸಿ ಬಿಹಾರದ ಶಾಸಕ ಪಪ್ಪು ಯಾದವ್ ಟ್ವೀಟ್ ಮಾಡಿದ್ದಾರೆ.
ತನ್ನದೇ ಆದ ತರ್ಕದ ಮೂಲಕ ಗಿರಿರಾಜ್ ಸಿಂಗ್ ಅವರು ದೇಶದ್ರೋಹಿ ಎಂದು ಸಾಬೀತುಪಡಿಸಿದ್ದಾರೆ ಎಂದು ಲಾಲು ಯಾದವ್ರ ಪಕ್ಷದ ಹಿರಿಯ ನಾಯಕ ವಿಜಯ್ ಪ್ರಕಾಶ್ ಟೀಕಿಸಿದ್ದಾರೆ.
ಸಚಿವರು ಕ್ಷಮೆ ಯಾಚಿಸುವಂತೆ ಉಪೇಂದ್ರ ಕುಶ್ವಾಹ್ ಅವರ ಆರ್ಎಲ್ಎಸ್ಪಿಯ ರಾಷ್ಟ್ರೀಯ ವಕ್ತಾರ ಫಝಲ್ ಇಮಾಲ್ ಮಲಿಕ್ ಆಗ್ರಹಿಸಿದ್ದಾರೆ.
ಗಿರಿರಾಜ್ ಸಿಂಗ್ ಅವರ ಹೇಳಿಕೆಯನ್ನು ಪ್ರತಿಪಕ್ಷಗಳು ತಿರುಚಿವೆ ಎಂದು ಬಿಜೆಪಿ ಆರೋಪಿಸಿದೆ. ಬಿಹಾರದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಜೆಡಿಯುವ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ