ನವದೆಹಲಿ, ಮಾ.7- ಭಾರತ-ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನ ಹೆಚ್ಚುವರಿ ಸೇನಾ ಪಡೆ ಮತ್ತು ಮಿಲಿಟರಿ ಸಾಧನಗಳನ್ನು ಗಡಿ ಬಳಿ ಜಮಾವಣೆ ಮಾಡುತ್ತಿದೆ.
ಆಫ್ಘಾನಿಸ್ತಾನದ ಬೆಂಬಲದಿಂದ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೂಕ್ಷ್ಮ ಪ್ರದೇಶಗಳಲ್ಲಿ ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿದೆ ಎಂದು ಉನ್ನತ ಭದ್ರತಾ ಮೂಲಗಳು ತಿಳಿಸಿವೆ.
ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನ ಸಂಭಾವ್ಯ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ಮುಂದುವರೆಸುವ ಸಾಧ್ಯತೆಯಿರುವುದರಿಂದ ಭಾರತೀಯ ಸೇನೆ ಪಾಕ್ ವಿರುದ್ಧ ಕಠಿಣ ಎಚ್ಚರಿಕೆ ನೀಡಿದೆ. ಯಾವುದೇ ಪ್ರಚೋದನಾಕಾರಿ ಅಥವಾ ದುಸ್ಸಾಹಸಕ್ಕೆ ಕೈ ಹಾಕಿದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.
ರಜೌರಿ ಜಿಲ್ಲೆಯ ನೌಶೆರಾ ವಲಯದ ಮುಂಚೂಣಿ ನೆಲೆ ಗಳನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನ 155 ಮಿಲಿ ಮೀಟರ್ ಫಿರಂಗಿ ಬಂದೂಕು ಸಹಾಯದಿಂದ ದಾಳಿ ನಡೆಸಿದಾಗ ಭಾರತೀಯ ಸೇನೆ ಬೋಪೋಸ್ರ್ಸ್ ಗನ್ಗಳಿಂದ ದಿಟ್ಟ ಪ್ರತ್ಯುತ್ತರ ನೀಡಿದೆ.ಬಳಿಕ ಪಾಕಿಸ್ತಾನಕ್ಕೆ ಭಾರತ ಈ ಎಚ್ಚರಿಕೆ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ