ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದಕ್ಕೆ ಸಂಧಾನದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಸಂಧಾನಕ್ಕಾಗಿ ಸಮಿತಿಯೊಂದನ್ನೂ ರಚಿಸಲಾಗಿದೆ. ಈ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ಅವರು ಅಧ್ಯಕ್ಷರಾಗಿರಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.
ಸಂಧಾನ ಪ್ರಕ್ರಿಯೆಯನ್ನು ಫೈಜಾಬಾದ್ನಲ್ಲಿ ನಡೆಸಬೇಕು ಮತ್ತು ಸಂಪೂರ್ಣವಾಗಿ ಚಿತ್ರೀಕರಿಸಬೇಕು. ಶ್ರೀಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಅವರೂ ಸಂಧಾನ ಸಮಿತಿಯಲ್ಲಿರಬೇಕು ಎಂದು ಸಂವಿಧಾನ ಪೀಠ ಹೇಳಿದೆ.
ಸಂಧಾನ ಪ್ರಕ್ರಿಯೆ ನಾಲ್ಕು ವಾರಗಳ ಒಳಗೆ ಆರಂಭಗೊಂಡು ಎಂಟು ವಾರಗಳ ಒಳಗೆ ಪೂರ್ಣಗೊಳ್ಳಬೇಕು. ನಾಲ್ಕು ವಾರಗಳ ಒಳಗೆ ಸಂಧಾನ ಸಮಿತಿಯು ಮೊದಲ ವರದಿ ಸಲ್ಲಿಸಬೇಕು. ಸಂಧಾನಕಾರರಿಗೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸೌಲಭ್ಯ ಒದಗಿಸಬೇಕು. ಅಗತ್ಯವೆನಿಸಿದಲ್ಲಿ ಸಂಧಾನಕಾರರು ಹೆಚ್ಚಿನ ಕಾನೂನು ಸಹಕಾರ ಪಡೆಯಬಹುದು ಎಂದೂ ಪೀಠ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ವಿಚಾರಣೆ ನಡೆಸಿದ್ದ ಸಂವಿಧಾನ ಪೀಠ, ಸಂಧಾನದ ಸಲಹೆ ನೀಡಿತ್ತು. ಆದರೆ, ನಿರ್ಮೋಹಿ ಅಖಾಡ ಹೊರತುಪಡಿಸಿದಂತೆ ಉಳಿದ ಹಿಂದುತ್ವಪರ ಸಂಘಟನೆಗಳು ಈ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸುವುಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಮುಸ್ಲಿಂ ಸಂಘಟನೆಗಳು ಪ್ರಸ್ತಾವವನ್ನು ಸ್ವಾಗತಿಸಿದ್ದವು. ಒಮ್ಮತ ಮೂಡದ್ದರಿಂದ ನ್ಯಾಯಾಲಯ ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.
ಮಾಧ್ಯಮಗಳಿಗೆ ನಿರ್ಬಂಧ: ಗೋಪ್ಯತೆ ಕಾಪಾಡುವ ನಿಟ್ಟಿನಲ್ಲಿ ಸಂಧಾನ ಪ್ರಕ್ರಿಯೆಯ ವರದಿ ಮಾಡಲು ಮಾಧ್ಯಮಗಳಿಗೆ ಅವಕಾಶ ನೀಡಬಾರದು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ