ಚಿತ್ರದುರ್ಗ: ಇಂದಿರಾಗಾಂಧಿ ಅವರಿಗಿಂತಲೂ ಭೀಕರವಾದ ತುರ್ತುಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಗುಮ್ಮಾಗಿ ಸೃಷ್ಟಿ ಮಾಡಿದೆ. ಇದು ದೇಶಕ್ಕೆ ತೀರಾ ಅಪಾಯಕಾರಿ ಆಗಬಲ್ಲದು ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಆರೋಪಿಸಿದರು.
ನವೀಕೃತಗೊಂಡ ಜೆಡಿಎಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಜನತಂತ್ರ ವ್ಯವಸ್ಥೆಯ ಜೀವಾಳವಾಗಿರುವ ನ್ಯಾಯಾಲಯ, ಸಿಬಿಐ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದುರ್ಬಲಗೊಳಿಸಲಾಗಿದೆ. ಬಿಜೆಪಿಯ ಸರ್ವಾಧಿಕಾರಿ ಧೋರಣೆ ಹೀಗೆ ಮುಂದುವರಿದರೆ ಮೋದಿ ಮತ್ತೊಬ್ಬ ಹಿಟ್ಲರ್, ಮುಸ್ಸೊಲಿನಿ ಆಗಲಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.
‘ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಕೇಂದ್ರ ಸರ್ಕಾರದ ಅಡಿಯಾಳಲ್ಲ. ಅದೊಂದು ಸ್ವಾಯತ್ತ ಸಂಸ್ಥೆ. ಈ ಪರಿಜ್ಞಾನವೇ ಇಲ್ಲದ ಪ್ರಧಾನಿ, ಆರ್ಬಿಐನಲ್ಲಿದ್ದ ₹ 3 ಲಕ್ಷ ಕೋಟಿ ಹಣವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ್ದರು. ಇದಕ್ಕೆ ಒಪ್ಪದ ಗವರ್ನರ್ ಅವರನ್ನು ಮನೆಗೆ ಕಳುಹಿಸಿ ಸರ್ವಾಧಿಕಾರಿಯಂತೆ ನಡೆದುಕೊಂಡಿದ್ದಾರೆ’ ಎಂದು ಟೀಕಿಸಿದರು.
‘ಬಿಜೆಪಿಯ ಅಕ್ರಮಣಕಾರಿ ಸ್ವರೂಪದ ನಡೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಸ್ವಾಭಿಮಾನದಿಂದ ಬದುಕುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇಂತಹ ಪಕ್ಷವನ್ನು ಮಣಿಸಲು ಜಾತ್ಯತೀತ ಶಕ್ತಿಗಳು ಒಗ್ಗೂಡಿವೆ. ಪರಿಸ್ಥಿತಿಯ ಅನಿವಾರ್ಯತೆಯಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮನಸ್ಥಿತಿಯನ್ನು ಜೆಡಿಎಸ್ ಕಾರ್ಯಕರ್ತರು ಬೆಳೆಸಿಕೊಳ್ಳಬೇಕಿದೆ’ ಎಂದು ಕರೆ ನೀಡಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ