ಕೆ.ಸಿ.ಎಫ್ ಒಮಾನ್ ಸೊಹಾರ್ ಝೋನ್ ವತಿಯಿಂದ ಸೊಹಾರ್ ಬದ್ರ್ ಅಲ್ ಸಮಾ ಆಸ್ಪತ್ರೆಯ ಸಹಯೋಗದೊಂದಿಗೆ ಆರೋಗ್ಯ ಮತ್ತು ರಕ್ತದಾನ 2019 ಶಿಬಿರವು ಬದ್ರ್ ಅಲ್ ಸಮಾ ಆಸ್ಪತ್ರೆಯಲ್ಲಿ ನಡೆಯಿತು.
ಸಿದ್ದೀಕ್ ಮಾಂಬ್ಲಿ ಸುಳ್ಯ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಎಮ್ಮೆಮ್ಮಾಡ್ ಇವರು ನೆರವೇರಿಸಿದರು.
ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಕೆಸಿಎಫ್ INC ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ, ಬದ್ರ್ ಅಲ್ ಸಮಾ ಆಸ್ಪತ್ರೆ ಮ್ಯಾನೇಜರ್ ಶ್ರೀ ಮನೋಜ್ ಕುಮಾರ್, ಐಸಿಎಫ್ ಸೊಹಾರ್ ಪಿಆರ್ ಅಡ್ಮಿನ್ ಫಿರೋಸ್ ಅಬೂಬಕ್ಕರ್, ಇಕ್ಬಾಲ್ ಎರ್ಮಾಳ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಇಕ್ಬಾಲ್ ಬೊಲ್ಮಾರ್ ಮತ್ತು ಮನೊಜ್ ಕುಮಾರ್ ರವರನ್ನು ಸನ್ಮಾನಿಸಲಾಯಿತು ಹಾಗೂ ತಮ್ಮ ಅಮೂಲ್ಯವಾದ ರಕ್ತವನ್ನು ದಾನ ಮಾಡಿದವರಿಗೆ ಸರ್ಟಿಫಿಕೇಟ್ ವಿತರಿಸಲಾಯಿತು.
ಸಭೆಯಲ್ಲಿ ಸಾದಿಕ್ ಸುಳ್ಯ, ಶಫೀಕ್ ಮಾರ್ನಬೈಲು, ಫಾರೂಕ್ ಕುಕ್ಕಾಜೆ ಉಪಸ್ಥಿತರಿದ್ದರು. ಅಶ್ರಫ್ ಕುತ್ತಾರ್ ಸ್ವಾಗತಿಸಿ ಸಾದಿಕ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.