ಮಂಗಳೂರು, ಮಾ. 13- ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮೀನುಗಾರರು ನಿರ್ಧರಿಸಿದ್ದಾರೆ. ಕಾಣೆಯಾದ ಕಟುಬಂದ ಸದಸ್ಯರನ್ನು ಹುಡಕಿಕೊಡುವಲ್ಲಿ ಕೆಂದ್ರ ಮತ್ತು ರಾಜ್ಯಗಳ ನಿರಾಸಕ್ತಿಯನ್ನು ಪ್ರತಿಭಟಿಸಿ ಮೀನುಗಾರರು ಈ ಬಾರಿ ಚುನಾವಣೆ ಬಹಿಷ್ಕರಿಸಲು ತೀರ್ಮಾನ ಮಾಡಿದ್ದಾರೆ
ಕಳೆದ ವರ್ಷ ಡಿಸೆಂಬರ್ ನಲ್ಲಿ ಮಲ್ಪೆ ಬಂದರಿನ ಟ್ರಾವೆಲರ್ ಸುವರ್ಣ ತ್ರಿಭುಜ ದೋಣಿಯಲ್ಲಿ ಆಳವಾದ ಸಮುದ್ರಕ್ಕೆ ತೆರಳಿದ್ದ ಕೆಲವು ಮೀನುಗಾರರು ಕಾಣೆಯಾಗಿ 88 ದಿನಗಳು ಕಳೆದರೂ ಅವರು ಎಲ್ಲಿದ್ದಾರೆ ಎಂಬದು ಗೊತ್ತಿಲ್ಲ. ಕಟುಬಂದ ಸದಸ್ಯರು ಕಷ್ಟದಲ್ಲಿ ಇರಿವಾಗ ನಾವು ಯಾವ ರೀತಿ ಮತದಾನದಲ್ಲಿ ತೊಡಗಲು ಸಾದ್ಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ
ಕೇಂದ್ರವಾಗಲಿ ಇಲ್ಲ ರಾಜ್ಯವಾಗಲಿ ನಮ್ಮ ಕುಟುಂಬದ ನೆರವಿಗೆ ಬಂದಿಲ್ಲ ತಮ್ಮ ದುಃಖ ಕೇಳಲು ಯಾರು ಇಲ್ಲದಿರುವಾಗ ನಾವು ಮತದಾನದಲ್ಲಿ ಹೇಗೆ ನೆಮ್ಮದಿಯಿಂದ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಮೀನುಗಾರರು ತಮ್ಮ ಆತಂಕ ವ್ಯಕ್ತಪಡಿಸಿದ್ದರೆ.
ಈ ಘಟನೆಯು ಬೆಳಕಿಗೆ ಬಂದ ತಕ್ಷಣ, ನೌಕಾಪಡೆ, ಕೋಸ್ಟ್ ಗಾರ್ಡ್ ವರ್ ಸೇರಿದಂತೆ ಹಲವಾರು ಸಂಸ್ಥೆಗಳು ಕಾಣೆಯಾದ ಮೀನುಗಾರರನ್ನು ಪತ್ತೆ ಮಾಡಲು ಅವಿತರವಾಗಿ ಶ್ರಮಿಸಿದ್ದರೂ ಅದು ಫಲ ಕೊಟ್ಟಿಲ್ಲ. ಕಾಣೆಯಾದ ಮೀನುಗಾರರು ಏಲ್ಲಿದ್ದಾರೆ. ಹೇಗಿದ್ದಾರೆ ಎಂಬ ಖಚಿತ ಮತ್ತು ಅಧಿಕೃತ ಮಾಹಿತಿಯು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮೀನುಗಾರರು ಆಕ್ರೋಶಗೊಂಡಿದ್ದಾರೆ. ಚುನಾವಣೆಯನ್ನು ಬಹಿಷ್ಕರಿಸುವ ತೀರ್ಮಾನಕ್ಕೆ ಬಂದಿದ್ದಾರೆ.
ಮೀನುಗಾರರ ಸಂಘವು ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನನ್ನು ಭೇಟಿ ಮಾಡಿದೆ ಮತ್ತು ಕಾಣೆಯಾದ ಮೀನುಗಾರರನ್ನು ಹುಡುಕಿಕೊಡುವಂತೆ ಮನವಿ ಮಾಡಿದೆ. ಆದರೆ, ಇಲ್ಲಿವರೆಗೆ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಿವೆ. ಕಾಣೆಯಾದ ಮೀನುಗಾರರನ್ನು ಪತ್ತೆ ಹಚ್ಚಲು ಇನ್ನೂ ಸಾಧ್ಯವಾಗಿಲ್ಲ.















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ