ಮಂಜೇಶ್ವರ :ಮೀಂಜ ಯೂತ್ ಕೊರ್ಡಿನೇಷನ್ ಕಮಿಟಿ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಮಾರ್ಚ್17 ಆದಿತ್ಯವಾರದಂದು ಬೃಹತ್ ರಕ್ತದಾನ ಶಿಬಿರವು ಎಸ್.ವಿ.ವಿ.ಹೆಚ್. ಎಸ್ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ತನಕ ನಡೆಯಲಿದೆ.
ರಕ್ತದಾನ ಮಹಾದಾನ ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಮೂಹಿಕ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಮೀಂಜ ಪಂಚಾಯತ್ ನ ವ್ಯಾಪ್ತಿಯಲ್ಲಿ ಬರುವಂತಹ ನೋಂದಾವಣೆಯಾದ 39 ಸ್ಪೊರ್ಟ್ ಕ್ಲಬ್ , ಮಸೀದಿ, ಮಂದಿರ ಹಾಗೂ ಚರ್ಚ್ ಸದಸ್ಯರನ್ನು ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ.

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಯಂ ಪ್ರೇರಿತರಾಗಿ ಒಂದು ಜೀವ ಉಳಿಸುವ ನಿಟ್ಟಿನಲ್ಲಿ ಶ್ರೇಷ್ಟ ದಾನವಾದ ರಕ್ತದಾನದ ಮಹತ್ವವನ್ನು ಸಾರಿ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾನವೀಯ ಮೌಲ್ಯಗಳ ಕೊಂಡಿಯಾಗಿ ಈ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮೀಂಜ ಯೂತ್ ಕೋರ್ಡಿನೇಷನ್ ಪರವಾಗಿ ಕೋರಲಾಗಿದೆ.
ವರದಿ : ಹಫೀಝ್ ಇಸ್ಮಾಯಿಲ್ ಕೆ.ಸಿ ರೋಡ್
(ಆಡ್ಮಿನ್ ಬ್ಲಡ್ ಡೋನರ್ಸ್ ಮಂಗಳೂರು)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್