janadhvani

Kannada Online News Paper

ಪ್ರೀತಿಗಾಗಿ ಪೀಠತ್ಯಾಗ ಮಾಡಿದ ಸ್ವಾಮೀಜಿ- ಹುಡುಗಿಯೊಂದಿಗೆ ಪ್ರತ್ಯಕ್ಷ

ಕೊಪ್ಪಳ: ಪ್ರೀತಿಗಾಗಿ ಪೀಠತ್ಯಾಗ ಮಾಡಿ ನಾಪತ್ತೆಯಾಗಿದ್ದ ಸ್ವಾಮೀಜಿಯೊಬ್ಬರು ಪ್ರೀತಿಸಿದ ಹುಡಗಿಯೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರು ಹುಟ್ಟು ಹಬ್ಬ ಆಚರಣೆ ಮಾಡುತ್ತಿರೋ ಫೋಟೋ ವೈರಲ್ ಆಗಿದೆ.

ಜಿಲ್ಲೆಯ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿಗಾಗಿ ಪೀಠತ್ಯಾಗ ಮಾಡಿದ್ದರು. ಕಳೆದ ಜನವರಿಯಲ್ಲಿ ಪೀಠತ್ಯಾಗ ಮಾಡಿ ನಾಪತ್ತೆಯಾಗಿದ್ದ ಸಿದ್ದಲಿಂಗ ಸ್ವಾಮೀಜಿ ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪತ್ತೆಯಾಗಿದ್ದಾರೆ. ಮುಂಡರಗಿ ಕಾಲೇಜಿನಲ್ಲಿ ಸ್ವಾಮೀಜಿ ಪಾಠ ಮಾಡಲು ಹೋಗುತ್ತಿದ್ದರು. ಆಗ ಕಾಲೇಜಿಗೆ ಬರುತ್ತಿದ್ದ ಹುಡಗಿಯೊಬ್ಬಳ ಮೇಲೆ ಸ್ವಾಮೀಜಿಗೆ ಪ್ರೇಮಾಂಕುರವಾಗಿದೆ. ಬಳಿಕ ಹೇಗೋ ಇಬ್ಬರ ನಡುವೆ ಪ್ರೀತಿ ಹುಟ್ಟಿ, ಕೊನೆಗೆ ಸ್ವಾಮೀಜಿ ಹುಡುಗಿಗಾಗಿ ಪೀಠವನ್ನ ತ್ಯಾಗ ಮಾಡಿ ನಾಪತ್ತೆಯಾಗಿದ್ದರು.

ಈ ಬಗ್ಗೆ ಮಠದ ಭಕ್ತರು ಹಾಗೂ ಜನರು ಪ್ರಶ್ನಿಸಿದಾಗ, ಸಿದ್ದಲಿಂಗ ಸ್ವಾಮೀಜಿಗಳು ವೈಯಕ್ತಿಕ ಕಾರಣಕ್ಕಾಗಿ ಪೀಠ ತ್ಯಾಗ ಮಾಡಿದ್ದಾರೆಂದು ಮಠದ ಆಡಳಿತ ಮಂಡಳಿ ಉತ್ತರಿಸಿ ಸುಮ್ಮನಾಗಿತ್ತು ಇದೀಗ ಮೂರು ತಿಂಗಳ ಬಳಿಕ ಸ್ವಾಮೀಜಿ ಹುಡಗಿಯೊಂದಿಗೆ ಪ್ರತ್ಯಕ್ಷವಾಗಿದ್ದಾರೆ. ಹುಡುಗಿಯೊಂದಿಗೆ ಸ್ವಾಮೀಜಿ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

error: Content is protected !! Not allowed copy content from janadhvani.com