ಮಂಗಳೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕ್ಯಾಂಪಸ್ ಹಾಗೂ ವಿಸ್ಡಂ ಸಮಿತಿ ವತಿಯಿಂದ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿಗಳು,ಜಿಲ್ಲಾ ವಿಸ್ಡಂ ಕನ್ವೀನರ್ ಗಳು,ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿಗಳು,ಡಿವಿಷನ್ ವಿಸ್ಡಂ ಕನ್ವೀನರ್ ಗಳಿಗಾಗಿ ರಾಜ್ಯ ಮಟ್ಟದ ವರ್ಕ್ ಶಾಪ್ “ತಿಂಕ್ ಲ್ಯಾಬ್” ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಸರ್ ರವರ ಅಧ್ಯಕ್ಷತೆಯಲ್ಲಿ ಮಿಸ್ಬಾಹ್ ಮಹಿಳಾ ಕಾಲೇಜು ಕಾಟಿಪಳ್ಳದಲ್ಲಿ ನಡೆಯಿತು.
ಎಸ್ಸೆಸ್ದೆಫ್ ರಾಷ್ಟ್ರೀಯ ಸದಸ್ಯ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ಯಖ್ಯಾತ ಕೆರಿಯರ್ ಗೈಡರ್ ಜಮಾಲ್ ಮಾಲಿಕುನ್ನು, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್,ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಮೊದಲಾದವರು ತರಗತಿಯನ್ನು ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ರಾಜ್ಯ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಹಾಜಿ ಮುಮ್ತಾಝ್ ಅಲಿ ಸಂದೇಶ ಭಾಷಣ ಮಾಡಿದರು.
ಕಾರ್ಯಾಗಾರದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ,ಅಬ್ದುಲ್ ರಹ್ಮಾನ್ ಮೊಗರ್ಪಣೆ,ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷ ಫಾರೂಖ್ ಸಖಾಫಿ ಕೃಷ್ಣಾಪುರ,ಎಸ್.ವೈ.ಎಸ್ ನಾಯಕರಾದ ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್,ಆಸಿಫ್ ಹಾಜಿ ಕೃಷ್ಣಾಪುರ,ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ್,ರಾಜ್ಯ ನಾಯಕರಾದ ಸಫ್ವಾನ್ ಚಿಕಮಗಳೂರು,ಶರೀಫ್ ಮಡಿಕೇರಿ,ಶಾಫಿ ಸ ಅದಿ ಬೆಂಗಳೂರು,ಹಕೀಂ ಬೆಂಗಳೂರು,ನಾಸರ್ ಬಜಪೆ,ಉಬೈದ್ ಫರೀದ್ ನಗರ,ಇಕ್ಬಾಲ್ ಮಂಗಳಪೇಟೆ,ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹೈದರ್ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿದರು,ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಮುಸ್ತಫಾ ಮಾಸ್ಟರ್ ಉಳ್ಳಾಲ ವಂದಿಸಿದರು.