ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸುಪ್ರೀಂಕೋರ್ಟ್ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ( ಮಾರ್ಚ್ 20, 2019) ರಂದು ಅರವಿಂದ್ ಕೇಜ್ರಿವಾಲ್ ಮಾಡಿರುವ ಟ್ವೀಟ್ವೊಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ದಿಲ್ಲಿ ಪೊಲೀಸ್ ಕಮೀಷನರ್ ಅಮೂಲ್ಯ ಪಟ್ನಾಯಕ್ಗೆ ದೂರು ನೀಡಿದ್ದಾರೆ. ಪೊರಕೆ ( ಎಎಪಿ ಚಿಹ್ನೆ ) ಹಿಂದೂಗಳ ಸ್ವಸ್ತಿಕ್ ಚಿಹ್ನೆಯನ್ನು ಅಟ್ಟಾಡಿಸಿಕೊಂಡು ಹೋಗುತ್ತಿರುವ ಫೋಟೋವೊಂದನ್ನು ಅರವಿಂದ್ ಕೇಜ್ರಿವಾಲ್ ತಮ್ಮ ಟ್ವಿಟರ್ನಲ್ಲಿ ಹಾಕಿಕೊಂಡಿದ್ದರು.
Delhi: Complaint filed against Delhi Chief Minister Arvind Kejriwal for allegedly hurting religious sentiments in one of his tweets (in pic). pic.twitter.com/GwQ3OooFHK
— ANI (@ANI) March 23, 2019
ಸ್ವಸ್ತಿಕ್ ಚಿಹ್ನೆ ಹಿಂದೂಗಳ ಪವಿತ್ರ ಸಂಕೇತವಾಗಿದ್ದು, ಇದನ್ನು ಹಲವು ಹಿಂದೂಗಳು ಪೂಜೆ ಮಾಡುತ್ತಾರೆ. ಅಲ್ಲದೆ, ವಿವಿಧ ದಾರ್ಮಿಕ ಸಂಘಟನೆಗಳ ನಡುವೆ ಸಾಮರಸ್ಯ ಇಲ್ಲದಿರುವಂತೆ ಮಾಡುವುದು, ದ್ವೇಷ ಹಾಗೂ ಕೆಟ್ಟ ಭಾವನೆಯನ್ನು ಸೃಷ್ಟಿ ಮಾಡಲು ಈ ರೀತಿ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ ಎಂದು ಸುಪ್ರೀಂಕೋರ್ಟ್ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಆರೋಪಿಸಿದ್ದಾರೆ.
ಇನ್ನು, ”ಕೇಜ್ರಿವಾಲ್ ವಿರುದ್ಧ ಐಪಿಸಿಯ ಹಲವು ಸೆಕ್ಷನ್ಗಳ ಅನುಸಾರ ಎಫ್ಐಆರ್ ದಾಖಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ಶ್ರೀವಾಸ್ತವ ದೂರಿನಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ