ನವದೆಹಲಿ: ಪ್ರಧಾನಿ ಮೋದಿ ಮಿಷನ್ ಶಕ್ತಿ ಘೋಷಣೆ ನಂತರ ಅಚ್ಚರಿ ಎನ್ನುವಂತೆ ಈಗ ಚುನಾವಣಾ ಆಯೋಗ ಈ ಘೋಷಣೆ ಹಿಂದಿನ ತುರ್ತಿನ ವಿಚಾರವಾಗಿ ಸರ್ಕಾರದಿಂದ ವಿವರಣೆ ಕೋರಿದೆ ಎಂದು ಮೂಲಗಳು ತಿಳಿಸಿವೆ
ಪ್ರಧಾನಿ ಮೋದಿ ಇಂದು ಭಾರತ ಅಂತರಿಕ್ಷದಲ್ಲಿನ ಲೈವ್ ಉಪಗ್ರಹವನ್ನು ಹೊಡೆದುರುಳಿಸಿರುವ ಕುರಿತಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ತಿಳಿಸಿದ್ದರು. ಇದಾದ ಬೆನ್ನಲ್ಲೇ ಕಾಂಗ್ರೆಸ್, ಸಮಾಜವಾದಿ, ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳು ಇದನ್ನು ರಾಜಕೀಯ ಪ್ರೇರಿತ ನಡೆ ಎಂದು ಹೇಳಿಕೆ ನೀಡಿದ್ದವು.
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ಘೋಷಣೆಯ ವಿಚಾರವಾಗಿ ಈಗ ವಿಚಾರಣೆಗೆ ಚುನಾವಣಾ ಆಯೋಗ ಮುಂದಾಗಿದೆ.ರಾಷ್ಟ್ರದ ಭದ್ರತೆ ತುರ್ತಿನ ವಿಚಾರವಾಗಿ ಈಗ ಸಂಬಂಧ ಪಟ್ಟ ಈ ಬೆಳವಣಿಗೆ ವಿಚಾರವಾಗಿ ಸಮಗ್ರ ತನಿಖೆ ಮುಂದಾಗಲಿದೆ ಎನ್ನಲಾಗಿದೆ.
ಚುನಾವಣಾ ಆಯೋಗದ ಮೂಲಗಳು ಹೇಳುವಂತೆ ಪ್ರಧಾನಿ ಭಾಷಣದ ಹುಟ್ಟು ಹಾಗೂ ಅದಕ್ಕಾಗಿ ಪ್ರಧಾನಿ ಕಚೇರಿ ಮತ್ತು ರಕ್ಷಣಾ ಸಚಿವಾಲಯದ ನಡುವೆ ನಡೆದ ಬೆಳವಣಿಗೆಗಳನ್ನು ಆಯೋಗ ಪರಿಶೀಲಿಸಲಿದೆ ಎನ್ನಲಾಗಿದೆ.ಇದೇ ವೇಳೆ ಪ್ರಧಾನಿ ಭಾಷಣವನ್ನು ಈಗ ಚುನಾವಣಾ ಆಯೋಗ ಸಂಪೂರ್ಣವಾಗಿ ಪರಿಶೀಲನೆಗೆ ಒಳಪಡಿಸಲಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ