ಮಂಡ್ಯ: ‘ಜೆಡಿಎಸ್, ಕಾಂಗ್ರೆಸ್ ಮುಖಂಡರ ಮನೆ, ಕಚೇರಿಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಯುವ ಸಾಧ್ಯತೆ ಇದೆ. ಅದಕ್ಕಾಗಿ 300 ಮಂದಿ ಅಧಿಕಾರಿಗಳು ಸಿದ್ಧರಾಗಿದ್ದು ಸಿಆರ್ಪಿಎಫ್ ಯೋಧರೊಂದಿಗೆ ದಾಳಿ ನಡೆಯಲಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ಆತ್ಮೀಯರಾಗಿರುವ ಬಿಜೆಪಿ ಮುಖಂಡರೊಬ್ಬರು ಕರೆ ಮಾಡಿ ವಿಷಯ ತಿಳಿಸಿದರು. ಆದಾಯ ತೆರಿಗೆ ಇಲಾಖೆ ದೆಹಲಿ ಉಸ್ತುವಾರಿ ನೋಡಿಕೊಳ್ಳುವ ಬಾಲಕೃಷ್ಣ ಎಂಬ ಅಧಿಕಾರಿ ದಾಳಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಸಿಬ್ಬಂದಿಯನ್ನು ಕರೆದೊಯ್ಯಲು 300 ಕ್ಯಾಬ್ಗಳು ಸಿದ್ಧಗೊಂಡಿವೆ. ಐಟಿ ದಾಳಿಯಲ್ಲಿ ರಾಜ್ಯದ ಪೊಲೀಸ್ ಇಲಾಖೆ ನೆರವು ಪಡೆಯಬೇಕು. ಅದನ್ನು ಬಿಟ್ಟು ಸಿಆರ್ಪಿಎಫ್ ಯೋಧರನ್ನು ಬಳಸಿಕೊಂಡು ದಾಳಿ ನಡೆಸುವ ಯೋಜನೆ ರೂಪಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳ ಆಟ ನಮಗೆ ಗೊತ್ತಿದೆ’ ಎಂದರು.
‘ಇಷ್ಟು ಕೀಳು ಮಟ್ಟದ ರಾಜಕೀಯ ಮಾಡಿ ನಮ್ಮನ್ನು ಹೆದರಿಸಲು ಯತ್ನಿಸುತ್ತಿದ್ದಾರೆ. ನಾವು ದರೋಡೆ ಮಾಡಿಲ್ಲ, ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಪ್ರಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇವೆ. ಐಟಿ ಅಧಿಕಾರಿಗಳು ಕೇಂದ್ರದ ಏಜೆಂಟ್ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಹೊಸನಗರದ ಬಳಿ ₹ 2 ಕೋಟಿ ಜಪ್ತಿ ಮಾಡಿದ್ದಾರೆ. ಎಲ್ಲಿಂದ ಜಪ್ತಿ ಮಾಡಿದರು ಎಂಬ ಬಗ್ಗೆ ಮಾಹಿತಿ ನೀಡಿದ್ದಾರಾ’ ಎಂದು ಪ್ರಶ್ನಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ